ಸಿಎಂ ಬಿ.ಎಸ್​ ಯಡಿಯೂರಪ್ಪರವರ 78ನೇ ಜನ್ಮದಿನದ ಸಂಭ್ರಮ : ಕಾವೇರಿ ಮತ್ತು ಧವಳಗಿರಿ ನಿವಾಸಕ್ಕೆ ಬಿಗಿ ಭದ್ರತೆ

11:01 AM, Thursday, February 27th, 2020
Share
1 Star2 Stars3 Stars4 Stars5 Stars
(5 rating, 1 votes)
Loading...

cm

ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರಿಗೆ ಇಂದು 78ನೇ ವರ್ಷದ ಜನ್ಮದಿನ. ವಿಜೃಂಭಣೆಯಿಂದ ಬಿಎಸ್ವೈ ಹುಟ್ಟುಹಬ್ಬವನ್ನು ಆಚರಿಸಲು ಸಿದ್ದತೆ ಮಾಡಿಕೊಳ್ಳಲಾಗಿದೆ. ಸಿಎಂ ಯಡಿಯೂರಪ್ಪ ಇಂದು ಕಾವೇರಿ ನಿವಾಸಕ್ಕೆ ಆಗಮಿಸುವ ಹಿನ್ನೆಲೆ, ಕಾವೇರಿ ನಿವಾಸಕ್ಕೆ ಬಿಗಿಭದ್ರತೆ ಒದಗಿಸಲಾಗಿದೆ.

ಹುಟ್ಟುಹಬ್ಬದ ದಿನದಂದೇ ಸಿಎಂ ತಮ್ಮ ಅಧಿಕೃತ ನಿವಾಸವಾದ ಕಾವೇರಿಯಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಹೀಗಾಗಿ, ಈಗಾಗಲೇ ಸಿಎಂ ಕುಟುಂಬಸ್ಥರು ಸರ್ಕಾರಿ ಬಂಗಲೆಯಲ್ಲಿ ಪೂಜೆ ಸಲ್ಲಿಸುತ್ತಿದ್ದಾರೆ. ಇನ್ನು, ಕಾವೇರಿ ನಿವಾಸದ ಎದುರು ಸಿಎಂ ಹುಟ್ಟುಹಬ್ಬಕ್ಕೆ ಶುಭ ಕೋರುವ ಫ್ಲೆಕ್ಸ್ ಗಳು ರಾರಾಜಿಸುತ್ತಿವೆ.

ಬೆಳಿಗ್ಗೆಯಿಂದಲೂ ಸಿಎಂ ಮನೆಯಲ್ಲಿ ಹೋಮ ಹವನ ನಡೆಯುತ್ತಿದೆ. ಪೂಜೆಯಲ್ಲಿ ಸಿಎಂ ಮಕ್ಕಳು, ಸೊಸೆಯಂದಿರು ಹಾಗೂ ಕುಟುಂಬಸ್ಥರು ಪಾಲ್ಗೊಂಡಿದ್ದಾರೆ. ಸಂಸದ ಬಿ.ವೈ ರಾಘವೇಂದ್ರ, ವಿಜಯೇಂದ್ರ ಹಾಗೂ ಅವರ ಕುಟುಂಬದವರು ಪೂಜೆಯಲ್ಲಿ ಭಾಗಿಯಾಗಿದ್ದಾರೆ. ಬಿಎಸ್ವೈಗೆ ಹುಟ್ಟುಹಬ್ಬದ ಶುಭಾಶಯ ಕೋರಲು ಬಿಜೆಪಿ ನಾಯಕರು ಡಾಲರ್ಸ್ ಕಾಲೋನಿಯ ನಿವಾಸಕ್ಕೆ ತೆರಳುತ್ತಿದ್ದಾರೆ. ಸಂಸದ ಪಿಸಿ ಮೋಹನ್, ಮೇಯರ್ ಗೌತಮ್ ಇನ್ನೂ ಮೊದಲಾದವರು ಸಿಎಂಗೆ ಹುಟ್ಟುಹಬ್ಬದ ಶುಭ ಕೋರಿದ್ದಾರೆ.

ಹುಟ್ಟುಹಬ್ಬದ ಶುಭ ಕೋರಲು ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ಸಾಧ್ಯತೆ ಹಿನ್ನೆಲೆ, ಸಿಎಂ ಬಿಎಸ್ವೈ ಕಾವೇರಿ ನಿವಾಸಕ್ಕೆ ಭಾರಿ ಭದ್ರತೆ ಒದಗಿಸಲಾಗಿದೆ. ಪೊಲೀಸರು ಡಬಲ್ ಡಬಲ್ ಬ್ಯಾರಿಕೇಡ್ ಹಾಕಿ ಭದ್ರತೆ ಕಲ್ಪಿಸಿದ್ದಾರೆ. ಕಾವೇರಿ ನಿವಾಸಕ್ಕೆ ಪ್ರವೇಶಿಸುವ ಸ್ಥಳದಲ್ಲಿ ಬಿಗಿ ಭದ್ರತೆ ಮತ್ತೆ ಕಾವೇರಿ ಗೇಟ್ ಮುಂಭಾಗ ಕೂಡ ಭದ್ರತೆ ಒದಗಿಸಲಾಗಿದೆ. ಎರೆಡೆರೆಡು ಕಡೆ ಪೊಲೀಸರು ಹೆಚ್ಚಿನ ಭದ್ರತೆ ಕಲ್ಪಿಸಿದ್ದಾರೆ.

 

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English