ಸಚಿವ ಶ್ರೀರಾಮುಲು ಪುತ್ರಿ ರಕ್ಷಿತಾರ ಅದ್ಧೂರಿ ಮದುವೆ ಸಮಾರಂಭ

1:31 PM, Thursday, March 5th, 2020
Share
1 Star2 Stars3 Stars4 Stars5 Stars
(No Ratings Yet)
Loading...

sri-ramulu

ಬೆಂಗಳೂರು : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಶ್ರೀರಾಮುಲು ಅವರ ಪುತ್ರಿ ರಕ್ಷಿತಾ ಅವರು ಇಂದು ವೈವಾಹಿಕ ಜೀವನಕ್ಕೆ ಕಾಲಿಟ್ಟರು. ಹೈದರಾಬಾದ್‍ನ ಉದ್ಯಮಿ ಲಲಿತ್ ಸಂಜೀವ್ ರೆಡ್ಡಿ ಅವರ ಜತೆ ರಕ್ಷಿತಾ ಸಪ್ತಪದಿ ತುಳಿಯುವ ಮೂಲಕ ವಿವಾಹ ಬಂಧನಕ್ಕೆ ಒಳಗಾದರು.

ಅರಮನೆ ಮೈದಾನದಲ್ಲಿ ಜಗಮಗಿಸುವಂತೆ ಶೃಂಗಾರಗೊಂಡಿದ್ದ ವೇದಿಕೆಯಲ್ಲಿ ಬೆಳಗ್ಗೆ ಲಲಿತ್ ಸಂಜೀವ್‍ರೆಡ್ಡಿ ಅವರು ರಕ್ಷಿತಾಗೆ ಮಾಂಗಲ್ಯಧಾರಣೆ ಮಾಡಿದರು. ನೂತನ ದಂಪತಿಗಳಿಗೆ ಶುಭ ಕೋರಲು ಪಕ್ಷ ಭೇದ ಮರೆತು ವಿವಿಧ ರಾಜಕೀಯ ಮುಖಂಡರು ಆಗಮಿಸಿದ್ದರು.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಉಪ ಮುಖ್ಯಮಂತ್ರಿಗಳಾದ ಡಾ.ಅಶ್ವತ್ಥನಾರಾಯಣ, ಗೋವಿಂದ ಕಾರಜೋಳ, ಸಚಿವರಾದ ಬಸವರಾಜಬೊಮ್ಮಾಯಿ, ವಿ.ಸೋಮಣ್ಣ, ಕೆ.ಗೋಪಾಲಯ್ಯ ಸೇರಿದಂತೆ ಮತ್ತಿತರರು ಆಗಮಿಸಿದ್ದರು.ಉದ್ಯಮಿ ಮುಖೇಶ್ ಅಂಬಾನಿ ಪುತ್ರನ ವಿವಾಹವನ್ನೇ ನೆನಪಿಸುವಂತಿದ್ದ ಶ್ರೀರಾಮುಲು ಪುತ್ರಿಯ ಅದ್ಧೂರಿ ವಿವಾಹಕ್ಕೆ ಅರಮನೆ ಮೈದಾನವನ್ನು ವಿಶೇಷವಾಗಿ ಅಲಂಕರಿಸಲಾಗಿತ್ತು.

ಒಟ್ಟು 40 ಎಕರೆ ಜಾಗದಲ್ಲಿ ವೇದಿಕೆಯನ್ನು ನಿರ್ಮಾಣ ಮಾಡಲಾಗಿತ್ತು. ಮುಖೇಶ್ ಅಂಬಾನಿ ಪುತ್ರನ ವಿವಾಹಕ್ಕೆ ಸಿದ್ಧಪಡಿಸಿದ್ದ ಮಾದರಿಯಂತೆಯೇ ವೇದಿಕೆಯನ್ನು ವಿನ್ಯಾಸಗೊಳಿಸಲಾಗಿತ್ತು.

 

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English