ಮೈಸೂರು : ತನ್ವೀರ್​ ಸೇಠ್​ ಆಪ್ತ ಸಹಾಯಕನ ಮೇಲೆ ಮಾರಣಾಂತಿಕ ಹಲ್ಲೆ

10:52 AM, Friday, March 6th, 2020
Share
1 Star2 Stars3 Stars4 Stars5 Stars
(5 rating, 1 votes)
Loading...

rajani-annayya

ಮೈಸೂರು : ಕಳೆದ ಕೆಲ ದಿನಗಳ ಹಿಂದೆ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಕೊಲೆ ಯತ್ನ ನಡೆದಿತ್ತು. ಆ ಸುದ್ದಿ ಮಾಸುವ ಮುನ್ನವೇ ಇದೀಗ ಅವರ ಆಪ್ತನ ಕೊಲೆ ಯತ್ನ ಸಹ ನಡೆದಿದೆ.

ಮೈಸೂರು ಮಹಾನಗರ ಪಾಲಿಕೆ ಮಾಜಿ ಸದಸ್ಯನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಲಾಗಿದ್ದು, ರಜನಿ ಅಣ್ಣಯ್ಯ ಎಂಬುವವರ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ. ಮೈಸೂರಿನ ಯರಗನಹಳ್ಳಿಯಲ್ಲಿ ಈ ಘಟನೆ ನಡೆದಿದ್ದು, ಗ್ರಾಮದೇವತೆಯ ಹಬ್ಬದ ವೇಳೆ ಲಾಂಗು ಬೀಸಿರುವ ದುಷ್ಕರ್ಮಿಗಳು ಈ ಕೃತ್ಯವೆಸಗಿದ್ದಾರೆ.

ಕಾಂಗ್ರೆಸ್ ಮುಖಂಡರಾಗಿರುವ ರಜನಿ ಅಣ್ಣಯ್ಯ ಜಾತ್ರೆಯಲ್ಲಿ ಭಾಗಿಯಾಗಿದ್ದರು. ರಾಜಕೀಯ ವೈಷಮ್ಯದಿಂದಲೇ ಈ ಕೃತ್ಯ ನಡೆದಿದೆ ಎಂದು ಶಂಕಿಸಲಾಗಿದ್ದು, ಯರಗನಹಳ್ಳಿಯ ಮಹದೇವು ಹಾಗೂ ಚಿದಂಬರಂ ಈ ಕೃತ್ಯವೆಸಗಿದ್ದಾರೆ. ತಕ್ಷಣವೇ ಅವರನ್ನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಆರೋಪಿಗಳಲ್ಲಿ ಒಬ್ಬ ಮಹದೇವನನ್ನ ಗ್ರಾಮಸ್ಥರು ಹಿಡಿದು ಪೊಲೀಸರ ವಶಕ್ಕೆ ನೀಡಲಾಗಿದ್ದು, ಇನ್ನೋರ್ವ ಆರೋಪಿ ಚಿದಂಬರಂ ಪರಾರಿಯಾಗಿದ್ದಾನೆ.

ಘಟನೆ ನಡೆಯುತ್ತಿದ್ದಂತೆ ಯರಗನಹಳ್ಳಿಯಲ್ಲಿ ವ್ಯಾಪಕ ಪೊಲೀಸ್ ಬಂದೋಬಸ್ತ್ ನೀಡಲಾಗಿದೆ.

 

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English