- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಮಂಗಳೂರು ಪೊಲೀಸರ ಮೇಲೆ ಹಿಂಸಾಚಾರ; 21 ಆರೋಪಿಗಳ ಅರ್ಜಿ ತಿರಸ್ಕೃತ

lati Charge [1]ಮಂಗಳೂರು : ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಹೆಸರಿನಲ್ಲಿ  2019ರ ಡಿಸೆಂಬರ್‌ 19ರಂದು ಮಂಗಳೂರು ಪೊಲೀಸರ  ಮೇಲೆ ಹಿಂಸಾಚಾರ, ಕಲ್ಲೆಸೆತ  ಪ್ರಕರಣಕ್ಕೆ ಸಂಬಂಧಿಸಿದಂತೆ 21 ಆರೋಪಿಗಳಿಗೆ ಹೈಕೋರ್ಟ್ ನೀಡಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದು ಪಡಿಸಿದೆ.

ಇತ್ತೀಚೆಗಷ್ಟೇ ರಾಜ್ಯ ಹೈಕೋರ್ಟ್ 21 ಆರೋಪಿಗಳಿಗೆಜಾಮೀನು ಮಂಜೂರು ಮಾಡಿತ್ತು. ಈ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ಹೀಗಾಗಿ ಆರೋಪಿಗಳಿಗೆ ಹೈಕೋರ್ಟ್ ನೀಡಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದು ಪಡಿಸಿದೆ.

ರಾಜ್ಯದ ಪರ ವಾದ ಮಂಡಿಸಿದ  ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಆರೋಪಿಗಳು ಗಲಭೆಯಲ್ಲಿ ಭಾಗಿಯಾಗಿರುವುದಕ್ಕೆ ಹಲವಾರು ಪುರಾವೆ ಇದೆ ಎಂದು ವಾದಿಸಿದ್ದರು. ಸುಪ್ರೀಂ ಕೋರ್ಟಿನ ಮುಖ್ಯ ನ್ಯಾಯಮೂರ್ತಿ ಎಸ್.ಎ.ಬೋಬ್ಡೆ, ನ್ಯಾ.ಗವಾಯಿ, ನ್ಯಾ.ಸೂರ್ಯಕಾಂತ್ ಅವರು ಹೈ ಕೋರ್ಟ್ ಆದೇಶಕ್ಕೆ ಮಧ್ಯಂತರ ತಡೆ ನೀಡಿ ಆರೋಪಿಗಳಿಗೆ ನೋಟಿಸ್ ಜಾರಿಗೊಳಿಸಿದರು.

ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿಸಿ ನಡೆದ ಪ್ರತಿಭಟನೆ ಗಲಭೆಗೆ ತಿರುಗಿ ಹಿಂಸಾಚಾರ ನಡೆದು ಗೋಲಿಬಾರ್ ನಲ್ಲಿ ಇಬ್ಬರು ಸಾವನ್ನಪ್ಪಿದ್ದರು.

ಈ ಹಿಂಸಾಚಾರಕ್ಕೆ ಕಾರಣವಾಗಿದ್ದ ಎನ್ನಲಾದ 21 ಆರೋಪಿಗಳನ್ನು ಬಂಧಿಸಿದ್ದ ಪೊಲೀಸರ ಕ್ರಮ ಸರಿಯಲ್ಲ ಎಂದು ಅಭಿಪ್ರಾಯ ಪಟ್ಟಿದ್ದ ಹೈಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ಹೈಕೋರ್ಟ್ ನೀಡಿದ್ದ ಜಾಮೀನನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು.