ತೆವಲಿನ ಬಗ್ಗೆ ಹೆಚ್.ಡಿ. ಕುಮಾರಸ್ವಾಮಿಗೆ ಚೆನ್ನಾಗಿಯೇ ಗೊತ್ತಿದೆ : ಕೃಷಿ ಸಚಿವ ಬಿ.ಸಿ ಪಾಟೀಲ್‌ ತಿರುಗೇಟು

2:05 PM, Tuesday, March 10th, 2020
Share
1 Star2 Stars3 Stars4 Stars5 Stars
(No Ratings Yet)
Loading...

bc-patil

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಬಳಸುವಂತಹ ಹಗುರವಾದ ಪದಗಳನ್ನಾಗಲೀ ಅವರು ಹೇಳಿರುವಂತೆ ತೆವಲು ಭಾಷೆಯನ್ನಾಗಲೀ ತಾವು ಬಳಸುವುದಿಲ್ಲ ಎಂದು ಕೃಷಿ ಸಚಿವರಾದ ಬಿ.ಸಿ‌ಪಾಟೀಲ್ ಕುಮಾರಸ್ವಾಮಿ ಅವರಿಗೆ ತಿರುಗೇಟು ನೀಡಿದ್ದಾರೆ.

ವಿಧಾನಸೌಧದಲ್ಲಿ ಕುಮಾರಸ್ವಾಮಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಕೃಷಿ ಸಚಿವರು, ತೆವಲಿನ ಬಗ್ಗೆ ಕುಮಾರಸ್ವಾಮಿ ಅವರಿಗೆ ಬಹಳ ಚೆನ್ನಾಗಿಯೇ ಗೊತ್ತಿದೆ ಅನಿಸುತ್ತದೆ ಎಂದರು.

2006-07 ರಲ್ಲಿ ತಾವು ಅಷ್ಟು ಕೆಲಸ ಮಾಡಿಕೊಂಡು ಹೋಗಿದ್ದೇನೆ ಎಂದು ಕುಮಾರಸ್ವಾಮಿ ಅವರು ಹೇಳಿದ್ದಾರೆ. ಅದು ನನ್ನ ಮನೆಗೆ ಕೊಟ್ಟ ದುಡ್ಡಲ್ಲ ಬದಲಾಗಿ ಶಾಸಕನಾಗಿ ಗೆದ್ದು ಬಂದಿದ್ದಾಗ ಕ್ಷೇತ್ರದ ಅಭಿವೃದ್ಧಿಗೆ ಕೊಡಬೇಕಾದ ಹಣ ಅದು. ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡಿದ್ದು ನಾವು, ಕ್ಷೇತ್ರಕ್ಕೆ ಅನುದಾನ ಬಿಡುಗಡೆ ಮಾಡಿರುವುದು ಅವರ ಕರ್ತವ್ಯ. ಕ್ಷೇತ್ರಕ್ಕೆ ಕೊಟ್ಟ ಹಣವನ್ನು ಹೀಗೆ ಹೇಳುವುದು ಸರಿಯಲ್ಲ ಎಂದು ಕುಟುಕಿದರು.

ತಮ್ಮ ಬಗ್ಗೆ ಕುಮಾರಸ್ವಾಮಿ ಏಕವಚನದಲ್ಲಿ ಪದಪ್ರಯೋಗ ಮಾಡಿದ್ದಾರೆ. ಅವರು ಪದ ಬಳಕೆ ಮಾಡಿದ ರೀತಿಯಲ್ಲಿ ನಾನು ಮಾಡುವುದಿಲ್ಲ‌ ಎಂದ ಅವರು, ಹಿರೇಕೆರೂರಿನಲ್ಲಿ ಮೀಸಲಿಟ್ಟ ಹಣದಿಂದ ಕಾರ್ಯಕ್ರಮ ಉದ್ಘಾಟನೆ ಮಾಡಿದ್ದಾರೆ ಎಂದು ಕುಮಾರಸ್ವಾಮಿ ಹೇಳಿರುವುದು ಸತ್ಯಕ್ಕೆ ದೂರವಾದ ಮಾತು‌ ಎಂದರು.

ಅವರು ತಮ್ಮ ಬಜೆಟ್ ನಲ್ಲಿ ನಮ್ಮ ಕ್ಷೇತ್ರ ಕ್ಕೆ ಒಂದು ರೂಪಾಯಿಯನ್ನೂ ನೀಡಿಲ್ಲ.ಕಾಂಗ್ರೆಸ್‌ಗೆ ರಾಜೀನಾಮೆ ಕೊಟ್ಟ ಬಳಿಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಜತೆ ಚರ್ಚೆ ಮಾಡಿ, ಡಿಪಿಎಆರ್ ನಲ್ಲಿ ಆದೇಶ ಮಾಡಿಸಿ ಕ್ಯಾಬಿನೆಟ್ ನಲ್ಲಿ ಅನುಮೋದನೆ ಪಡೆದು ಬಳಿಕ 185 ಕೋಟಿ ರೂಪಾಯಿ ಬಿಡುಗಡೆ ಮಾಡಿಸಿ ನಮ್ಮ ಕ್ಷೇತ್ರದ ಅಭಿವೃದ್ಧಿ ಕಾರ್ಯ ಮಾಡಿದ್ದೇನೆ ಹೊರತು ಕುಮಾರಸ್ವಾಮಿ ಕೊಟ್ಟ ಅನುದಾನ ಅಲ್ಲ ಎಂದು ಕೃಷಿ ಸಚಿವರು ಸ್ಪಷ್ಟಪಡಿಸಿದರು.

 

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English