ಮಂಗಳೂರು : ಇತಿಹಾಸ ಪ್ರಸಿದ್ಧ ಮಹತೋಭಾರ ಮಂಗಳಾದೇವಿ ದೇವಸ್ಥಾನದಲ್ಲಿ ಬ್ರಹ್ಮಶ್ರೀ ಉಚ್ಚಿಲತ್ತಾಯ ನೀಲೇಶ್ವರ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಮಾ. 12, 2020 ಗುರುವಾರದಿಂದ ಮಾ. 17, 2020ನೇ ಮಂಗಳವಾರದವರೆಗೆ ಜಾತ್ರಾ ಮಹೋತ್ಸವ ಜರಗಲಿರುವುದು.
ಮಾ.16 ಸೋಮವಾರ ಮಧ್ಯಾಹ್ನ ಗಂಟೆ 12 ಕ್ಕೆ ರಥಾರೋಹಣ ನಂತರ ಅನ್ನದಾನ ಸೇವೆ ರಾತ್ರಿ 7 ರಿಂದ ರಥೋತ್ಸವ, ಬಲಿ, ಬಟ್ಟಲು ಕಾಣಿಕೆ, ಮಹಾಪೂಜೆ, ಭೂತಬಲಿ, ಕವಾಟ ಬಂಧನ, ಶಯನ ಮೊದಲಾದ ಧಾರ್ಮಿಕ ವಿಧಿಗಳು ನಡೆಯಲಿದೆ.
ಮಾ.17ರಂದು ತುಲಾಭಾರ ಸಂಜೆ 7ಕ್ಕೆ ಬಳಿ ಹೊರಟು ಅವಭೃತ ಸ್ನಾನ ಬಳಿಕ ಧ್ವಜಾವರೋಹಣ ನಡೆಯಲಿದೆ.
ಮಾ.18ರಂದು ರಾತ್ರಿ 8 ಗಂಟೆಗೆ ಶ್ರೀ ಕ್ಷೇತ್ರದ ಪರಿವಾರ ದೈವಗಳ ನೇಮೋತ್ಸವ ನಡೆಯಲಿದೆ.