ಮೈಸೂರು : ಸ್ನೇಹಿತರಿಗೆ ಕರೆ​​ ಮಾಡಿ ಆತ್ಮಹತ್ಯೆ ಮಾಡಿಕೊಂಡ ಯುವಕ

1:47 PM, Wednesday, March 11th, 2020
Share
1 Star2 Stars3 Stars4 Stars5 Stars
(No Ratings Yet)
Loading...

basavanna

ಮೈಸೂರು : ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಸ್ನೇಹಿತರಿಗೆ ಫೋನ್ ಮಾಡಿ ಹೇಳಿ ಕೆರೆಗೆ ಹಾರಿದ ಯುವಕ ಶವವಾಗಿ ಪತ್ತೆಯಾಗಿದ್ದಾನೆ.

ಭುಗತಗಳ್ಳಿ ನಿವಾಸಿ ಬಸವಣ್ಣ(28) ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಯುವಕ. ಈತ ಮಂಗಳವಾರ ಸಂಜೆ 5 ಗಂಟೆಗೆ ತನ್ನ ಗೆಳೆಯರಿಗೆ ಕರೆ ಮಾಡಿ, ಜೀವನದಲ್ಲಿ ನನಗೆ ತುಂಬಾ ಬೇಸರವಾಗಿದೆ. ನಾನು ಬದುಕುವುದಿಲ್ಲ, ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಹೇಳಿ ಕರೆ ಕಟ್ ಮಾಡಿದ್ದನಂತೆ.

ಆದರೆ, ಈತ ತಮಾಷೆ ಮಾಡುತ್ತಿದ್ದಾನೆ ಎಂದು ಭಾವಿಸಿದ್ದ ಸ್ನೇಹಿತರಿಗೆ, ಬಸವಣ್ಣ ಆತ್ಮಹತ್ಯೆ ಮಾಡಿಕೊಂಡಿರುವ ಸುದ್ದಿ ಭಾರೀ ಆಘಾತ ನೀಡಿದೆ. ಈ ಸಂಬಂಧ ವರುಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ಕೈಗೊಂಡಿದ್ದಾರೆ.

 

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English