- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಪಡಿತರದಲ್ಲಿ ಕುಚ್ಚಲಕ್ಕಿ ನೀಡಲು ಶಾಸಕ‌ ಯು.ಟಿ. ಖಾದರ್ ಸೂಚನೆ

utkader [1]ಮಂಗಳೂರು  : ನ್ಯಾಯ ಬೆಲೆ ಅಂಗಡಿಗಳಲ್ಲಿ ಪಡಿತರ ಕಾರ್ಡುದಾರರಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕುಚ್ಚಲಕ್ಕಿ ನೀಡಲು ಮುಖ್ಯಮಂತ್ರಿಯವರ ಗಮನಕ್ಕೆ ತರಲಾಗಿದೆ ಎಂದು ಶಾಸಕ ಯು.ಟಿ. ಖಾದರ್ ತಿಳಿಸಿದ್ದಾರೆ.

ಕರೋನಾ ನಿರ್ಬಂಧ ಹಿನ್ನೆಲೆಯಲ್ಲಿ ಪಡಿತರ ಅಕ್ಕಿಗೆ ವ್ಯಾಪಕ ಬೇಡಿಕೆ ಇದ್ದು, ಜಿಲ್ಲೆಯ ಜನತೆ ಕುಚ್ಚಲಕ್ಕಿ ಅನ್ನ ತಿನ್ನುವುದರಿಂದ ಅದನ್ನೇ ನ್ಯಾಯಬೆಲೆ ಅಂಗಡಿಗಳಲ್ಲಿ ನೀಡಬೇಕು. ಈ ಬಗ್ಗೆ ಮುಖ್ಯ ಮಂತ್ರಿ ಪ್ರಧಾನ ಕಾರ್ಯದರ್ಶಿ ಹಾಗೂ ಆಹಾರ ಇಲಾಖೆ‌ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅವರೊಂದಿಗೆ ತಾನು ಸಮಾಲೋಚಿಸಿದ್ದು, ಜಿಲ್ಲೆಯಲ್ಲಿ ಕುಚ್ಚಲಕ್ಕಿ ಪಡಿತರದಲ್ಲಿ ನೀಡಲು ಸಹಮತ ವ್ಯಕ್ತಪಡಿಸಿದ್ದಾರೆ ಎಂದು ಶಾಸಕರು ತಿಳಿಸಿದ್ದಾರೆ.