ಕೊರೊನಾ ನಿರ್ಮೂಲನೆಗಾಗಿ ಧರ್ಮಸ್ಥಳದಲ್ಲಿ ಜ್ಯೋತಿ ಬೆಳಗಿಸಿ ವಿಶೇಷ ಪ್ರಾರ್ಥನೆ

1:02 AM, Monday, April 6th, 2020
Share
1 Star2 Stars3 Stars4 Stars5 Stars
(No Ratings Yet)
Loading...
Dharmasthala Lightಧರ್ಮಸ್ಥಳ : ಕೊರೊನಾ ಸಂಪೂರ್ಣ ನಿರ್ಮೂಲನೆಯಾಗಿ ವಿಶ್ವದೆಲ್ಲೆಡೆ ಸುಖ-ಶಾಂತಿ, ನೆಮ್ಮದಿ ನೆಲೆಸಲಿ. ಎಲ್ಲರ ಭಯ-ಆತಂಕ ನಿವಾರಣೆಯಾಗಿ ಆರೋಗ್ಯ ಭಾಗ್ಯ ಸಿಗಲಿ ಎಂದು ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಭಾನುವಾರ ರಾತ್ರಿ 9 ಗಂಟೆಗೆ ದೇವಸ್ಥಾನದಲ್ಲಿ ಜ್ಯೋತಿ ಬೆಳಗಿಸಿ ವಿಶೇಷ ಪ್ರಾರ್ಥನೆ ಮಾಡಿದರು.
ಕೊರೊನಾ ನಿರ್ಮೂಲನೆಗಾಗಿ ನಾವೆಲ್ಲ ವಿಶ್ವದ ಎಲ್ಲಾ ಜನರೊಂದಿಗೆ ಏಕತೆ, ಸಂಘಟನೆ ಮತ್ತು ಪ್ರಜ್ಞೆಯೊಂದಿಗೆ ಹೋರಾಟ ನಡೆಸುತ್ತಿದ್ದೇವೆ.

ಜ್ಯೋತಿ ಪ್ರತಿಯೊಬ್ಬರ ಮನದ ಹಾಗೂ ಮನೆಯ ಕತ್ತಲನ್ನು ಹೋಗಲಾಡಿಸಿ ವಿಶ್ವಶಾಂತಿಗೆ ಪ್ರೇರಕವಾಗಲಿ. ಕೊರೊನಾ ಸಂಪೂರ್ಣ ನಿರ್ಮೂಲನೆಯಾಗಲಿ ಎಂದು ಎಲ್ಲರೂ ಏಕಕಾಲದಲ್ಲಿ ಪ್ರಾರ್ಥಿಸೋಣ ಎಂದು ಹೆಗ್ಗಡೆಯವರು ಸಲಹೆ ನೀಡಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English