ಆಶಾ ಕಾರ್ಯಕರ್ತೆಯ ಕೆಲಸಕ್ಕೆ ಅಡ್ಡಿಪಡಿಸಿದಕ್ಕೆ ಇಬ್ಬರ ಬಂಧನ

11:18 PM, Saturday, April 11th, 2020
Share
1 Star2 Stars3 Stars4 Stars5 Stars
(No Ratings Yet)
Loading...

asraf

ಮಂಗಳೂರು: ನಗರದ ಹೊರವಲಯ ಮಲ್ಲೂರಿನಲ್ಲಿ ಆಶಾ ಕಾರ್ಯಕರ್ತೆಯ ಕೆಲಸಕ್ಕೆ ಅಡ್ಡಿಪಡಿಸಿದ ಹಿನ್ನೆಲೆಯಲ್ಲಿ ಇಬ್ಬರನ್ನು ಬಂಧಿಸಲಾಗಿದೆ.

ಆರೋಪಿಗಳು ಆರೋಗ್ಯ ಇಲಾಖೆಗೆ ಸಂಬಂಧಿಸಿದಂತೆ ಕಾರ್ಯನಿರ್ವಹಿಸುತ್ತಿದ್ದ ವಸಂತಿ ಎಂಬ ಆಶಾ ಕಾರ್ಯಕರ್ತೆಯ ಕೆಲಸಕ್ಕೆ ಅಡ್ಡಿಪಡಿಸಿದ್ದಾರೆ. ಈ ಹಿನ್ನೆಲೆ ಇಲ್ಲನ ಬದ್ರಿಯಾ ನಗರದ ಇಸ್ಮಾಯಿಲ್(45), ಅಶ್ರಫ್ (32) ಎಂಬುವರನ್ನು ಮಂಗಳೂರು ಗ್ರಾಮೀಣ ಪೊಲೀಸರು ಬಂಧಿಸಿದ್ದಾರೆ.

ಆಶಾ ಕಾರ್ಯಕರ್ತೆ ವಸಂತಿ ಆರೋಗ್ಯ ಇಲಾಖೆಗೆ ಸಂಬಂಧಿಸಿದ ತನ್ನ ಅಧಿಕೃತ ಕರ್ತವ್ಯಗಳನ್ನು ನಿರ್ವಹಿಸುತ್ತಿರುವಾಗ ಅಲ್ಲಿಗೆ ಬಂದ ಆರೋಪಿಗಳು ಸಾರ್ವಜನಿಕ ಹಿತದೃಷ್ಟಿಯಿಂದ ಕರ್ತವ್ಯ ನಿರ್ವಹಿಸುವುದನ್ನು ತಡೆದಿದ್ದಾರೆ. ಅಲ್ಲದೆ ಕರ್ತವ್ಯಕ್ಕೆ ಅಡ್ಡಿಗೊಳಿಸಿ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ. ಬಳಿಕ ದೂರು ನೀಡಿದ ಅನ್ವಯ ಆರೋಪಿಗಳನ್ನು ಬಂಧಿಸಲಾಗಿದೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English