[1]ಮಂಗಳೂರು : ಯುವಕನೊಬ್ಬ ತೀವ್ರ ಉಸಿರಾಟದ ಸಮಸ್ಯೆಯಿಂದ ಆಸ್ಪತ್ರೆಗೆ ಕರೆದೊಯ್ಯುವ ದಾರಿಮಧ್ಯೆ ಮೃತಪಟ್ಟ ಘಟನೆ ಇಂದು ಸಂಜೆ ಸುರತ್ಕಲ್ ಸಮೀಪದ ಅಗರಮೇಲು ಎಂಬಲ್ಲಿ ನಡೆದಿದೆ.
ಕೊರೋನಾ ಶಂಕೆಯ ಹಿನ್ನೆಲೆಯಲ್ಲಿ ಕೋವಿಡ್ ಆಸ್ಪತ್ರೆಯ ವೈದ್ಯರು ಆತನ ಗಂಟಲ ದ್ರವವನ್ನು ಪರೀಕ್ಷೆಗಾಗಿ ರವಾನಿಸಿದ್ದಾರೆ.
27ರ ಹರೆಯದ ಯುವಕನಿಗೆ ತೀವ್ರ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದ್ದು ಮನೆಮಂದಿ ಆಸ್ಪತ್ರೆಗೆ ದಾಖಲಿಸಲು ಆಂಬುಲೆನ್ಸ್ ಕರೆಸಿದ್ದರು. ಆಂಬುಲೆನ್ಸ್ ನಲ್ಲಿ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಾಗ ದಾರಿಮಧ್ಯೆ ಸಾವನ್ನಪ್ಪಿದ್ದಾರೆ.
ವೆನ್ ಲಾಕ್ ಆಸ್ಪತ್ರೆಯಲ್ಲಿ ಮೃತ ಯುವಕನ ಗಂಟಲ ದ್ರವವನ್ನು ಸಂಗ್ರಹಿಸಿ ಪರೀಕ್ಷೆಗಾಗಿ ರವಾನಿಸಲಾಗಿದೆ. ಶಂಕಿತ ಕೊರೋನಾ ಅಥವಾ ಇತರ ಆರೋಗ್ಯ ಸಮಸ್ಯೆ ಶಂಕಿಸಲಾಗಿದ್ದು ಸ್ಥಳಕ್ಕೆ ಪೊಲೀಸರು, ಅರೋಗ್ಯ ಇಲಾಖೆ ಅಧಿಕಾರಿಗಳು ಭೇಟಿ ಕೊಟ್ಟಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭಿಸಬೇಕಿದೆ.