ಲಾಕ್ ಡೌನ್ ಇದ್ದರೂ ಕಲಬುರಗಿ ಸಿದ್ದಲಿಂಗೇಶ್ವರ ದೇವರ ಜಾತ್ರಾ ಮಹೋತ್ಸವ

8:56 PM, Thursday, April 16th, 2020
Share
1 Star2 Stars3 Stars4 Stars5 Stars
(No Ratings Yet)
Loading...

siddalingeshwaraಕಲಬುರಗಿ :  ಹೆಮ್ಮಾರಿ ಕೊರೊನಾ ತಡೆಗಟ್ಟಲು ಭಾರತ್ ಲಾಕ್ ಡೌನ್ ಜಾರಿಯಲ್ಲಿದ್ದಾಗಲೂ ಕಲಬುರಗಿಯ ಚಿತ್ತಾಪುರ ತಾಲ್ಲೂಕಿನ ರಾವೂರ್ ಗ್ರಾಮಸ್ಥರು ಸಿದ್ದಲಿಂಗೇಶ್ವರ ದೇವರ  ಜಾತ್ರಾ ಮಹೋತ್ಸವವನ್ನು ನೂರಾರು ಭಕ್ತರ ಪಾಲ್ಗೊಳ್ಳುವಿಕೆಯಲ್ಲಿ ಏಪ್ರಿಲ್ ನಡೆಸಿರುವುದು ಜಿಲ್ಲಾಡಳಿತ ಮತ್ತು ಪೊಲೀಸರ ನಿರ್ಲಕ್ಷ್ಯವನ್ನು ಎತ್ತಿತೋರಿಸಿದೆ.

ಕಲಬುರಗಿ ಕರ್ನಾಟಕದಲ್ಲಿ ಕೊರೊನಾ ಸೋಂಕಿಗೆ ಮೊದಲ ಬಲಿಯಾದ ಜಿಲ್ಲೆ

144 ‌ನಿಷೇದಾಜ್ಞೆ ಜಾರಿಯಲ್ಲಿದೆ. ಅಲ್ಲದೇ ಯಾವುದೇ ರೀತಿಯ ಜಾತ್ರೆ, ಉರೂಸ್, ಸಭೆ, ಸಮಾರಂಭಗಳನ್ನು ನಡೆಸದಂತೆ ಜಿಲ್ಲಾಡಳಿತ ನಿಷೇಧಾಜ್ಞೆ ಜಾರಿ ಮಾಡಿದೆ. ಆದ್ರೂ ರಾವೂರ್ ಗ್ರಾಮಸ್ಥರು ಮಾತ್ರ ನಿಷೇಧಾಜ್ಞೆ ನಡುವೆಯೂ ಗ್ರಾಮದ ಸಿದ್ದಲಿಂಗೇಶ್ವರ ದೇವರ ಜಾತ್ರಾ ಮಹೋತ್ಸವ ಹಿನ್ನೆಲೆ ಇಂದು ಬೆಳಿಗ್ಗೆ 6 ಗಂಟೆ ಸುಮಾರಿಗೆ ರಥೋತ್ಸವ ನೇರವೇರಿಸಿದ್ದಾರೆ.

ಯಾವುದೇ ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಜಾತ್ರಾ ಮಹೋತ್ಸವದಲ್ಲಿ ಸುಮಾರು 200 ಕ್ಕೂ ಹೆಚ್ಚು ಜನರು ಭಾಗಿಯಾಗಿ ರಥೋತ್ಸವ ನಡೆಸಿದ್ದಾರೆ. ವಿಪರ್ಯಾಸ ಅಂದ್ರೆ ರಾವೂರ್ ಗ್ರಾಮದಿಂದ ಕೇವಲ 5-6 ಕಿಲೋ ಮೀಟರ್ ದೂರದ ವಾಡಿ ಪಟ್ಟಣದಲ್ಲಿ ಇಬ್ಬರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಹೀಗಾಗಿ ವಾಡಿ ಪಟ್ಟಣದಾದ್ಯಂತ ಕಟ್ಟೆಚ್ಚರ ವಹಿಸಿ ಸೀಲ್ ಡೌನ್ ಮಾಡಲಾಗಿದೆ. ಆದ್ರೂ ರಾವೂರ್ ಜನರು  ಮಾತ್ರ ಕಿಲ್ಲರ್ ಕೊರೊನಾ ವೈರಸ್ ಬಗ್ಗೆ ಸಂಪೂರ್ಣ ನಿರ್ಲಕ್ಷ್ಯ ತೋರಿ ಜಾತ್ರಾ ಮಹೋತ್ಸವ ನಡೆಸಿದ್ದಾರೆ‌.

ಗಮನಿಸಬೇಕಾದ ಅಂಶ ಅಂದ್ರೆ ಜಾತ್ರಾ ಮಹೋತ್ಸವ ತಡೆಯಬೇಕಾದ ಅಧಿಕಾರಿಗಳು ವಿಫಲರಾಗಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English