ದೆಹಲಿಗೆ ತೆರಳಿದ್ದ ಉಪ್ಪಿನಂಗಡಿಯ ವ್ಯಕ್ತಿಗೆ ಕೋವಿಡ್-19 ಸೋಂಕು

2:49 PM, Friday, April 17th, 2020
Share
1 Star2 Stars3 Stars4 Stars5 Stars
(No Ratings Yet)
Loading...

covid19 ಮಂಗಳೂರು: ದೆಹಲಿಗೆ ತೆರಳಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಉಪ್ಪಿನಂಗಡಿಯ ನಿವಾಸಿ ಯೋರ್ವರಿಗೆ ಕೋವಿಡ್-19 ಸೋಂಕು ಇರುವುದು ಶುಕ್ರವಾರ ದೃಢಪಟ್ಟಿದೆ.

ವೈಯಕ್ತಿಕ ಕೆಲಸದ ಹಿನ್ನೆಲೆ ಇತ್ತೀಚೆಗೆ ಈ ಯುವಕ ದೆಹಲಿಗೆ ತೆರಳಿದ್ದ ಎನ್ನಲಾಗಿದೆ. ಕಳೆದ ಮಾ.21ರಂದು ನಿಜಾಮುದ್ದೀನ್ ರೈಲಿನಲ್ಲಿ ಮಂಗಳೂರಿಗೆ ವಾಪಾಸ್ ಬಂದಿದ್ದ. ಫೋನ್ ಟವರ್ ಲೊಕೇಶನ್ ಆಧಾರದಲ್ಲಿ ಜಿಲ್ಲಾಡಳಿತ ವ್ಯಕ್ತಿಯನ್ನು ಪತ್ತೆ ಮಾಡಿ ಕ್ವಾರಂಟೈನ್ ನಲ್ಲಿ ಇಡಲಾಗಿತ್ತು.

ವ್ಯಕ್ತಿಯನ್ನ ಕ್ವಾರಂಟೈನ್ ಮಾಡಿ ಗಂಟಲ ದ್ರಾವಣ ಪರೀಕ್ಷೆಗೆ ಕಳುಹಿಸಲಾಗಿತ್ತು. ಇದೀಗ ಬಂದ ವರದಿಯಲ್ಲಿ ಯುವಕನಿಗೆ ಕೋವಿಡ್-19 ಪಾಸಿಟಿವ್ ಆಗಿರುವುದು ದೃಢವಾಗಿದೆ.

ಮಾ.20ರಂದು ಯುವಕ ನಿಜಾಮುದ್ದೀನ್ ರೈಲಿನಲ್ಲಿ ಬಂದು ಮಾ.21ರಂದು ಮಂಗಳೂರಿಗೆ ಆಗಮಿಸಿದ್ದ. ನಂತರ ಆತನನ್ನು ಪತ್ತೆ ಮಾಡಿದ್ದ ಜಿಲ್ಲಾಡಳಿತ ಮಾ.23ರಿಂದಲೇ ಮಂಗಳೂರಿನಲ್ಲಿ ಕ್ವಾರೆಂಟೈನ್ ನಲ್ಲಿ ಇಡಲಾಗಿತ್ತು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English