ಭಟ್ಟಿ ಸಾರಾಯಿ ತಯಾರಿಕೆಗೆ ದಾಸ್ತಾನಿರಿಸಿದ ಹುಳಿ ರಸವನ್ನು ಪತ್ತೆಹಚ್ಚಿದ ಅಬಕಾರಿ ಇಲಾಖೆ

4:34 PM, Friday, April 17th, 2020
Share
1 Star2 Stars3 Stars4 Stars5 Stars
(No Ratings Yet)
Loading...

hulirasa ಮಂಗಳೂರು :   ಅಬಕಾರಿ ಜಂಟಿ ಆಯುಕ್ತರಾದ  ಶ್ರೀಮತಿ ಶೈಲಜಾ ಕೋಟೆ ರವರ ನಿರ್ದೇಶನದಂತೆ ಅಬಕಾರಿ ಅಧೀಕ್ಷಕರು ವಿನೋದ್ ಕುಮಾರ್ ರವರ ನೇತೃತ್ವದಲ್ಲಿ ಮಂಗಳೂರು ಉಪ ವಿಭಾಗ-1 ರ ಅಬಕಾರಿ ಉಪ ಅಧೀಕ್ಷಕರು ಶಿವಪ್ರಸಾದ್ ಮಾರ್ಗದರ್ಶನದಂತೆ ಉಪ ವಿಭಾಗ-1ರ ಎಲ್ಲಾ ಅಬಕಾರಿ ನಿರೀಕ್ಷಕರು,ಉಪ-ನಿರೀಕ್ಷಕರು ಹಾಗೂ ಸಿಬ್ಬಂದಿಗಳು ಮತ್ತು ಜಿಲ್ಲಾ ತಂಡದ ಅಧಿಕಾರಿಗಳು ಮತ್ತು ಸಿಬ್ಬಂದಿಗಳೊಂದಿಗೆ ಇನೊಲಿ ಗ್ರಾಮದ ನೇತ್ರಾವತಿ ನದಿಯ ದಡದಲ್ಲಿ ಸಾಮೂಹಿಕ ಅಬಕಾರಿ ದಾಳಿ ನಡೆಸಲಾಗಿ ಪಜಿಲ ಎಂಬಲ್ಲಿನ ಹೊಳೆ ಬದಿಯಲ್ಲಿ ಎರಡು ಬ್ಯಾರಲ್ ಗಳಲ್ಲಿ ಭಟ್ಟಿ ಸಾರಾಯಿ ತಯಾರಿಕೆ ಗಾಗಿ ದಾಸ್ತಾನಿಸಿರುವ 400 ಲೀಟರ್ ಗಳಷ್ಟು ಹುಳಿ ರಸವನ್ನು ಪತ್ತೆಹಚ್ಚಲಾಗಿದೆ.

ಈ ಸಂಬಂಧ ಪ್ರಕರಣವನ್ನು ದಾಖಲಿಸಿಕೊಂಡು ಮುಂದಿನ ತನಿಖೆಯನ್ನು ಮಂಗಳೂರು ದಕ್ಷಿಣ ವಲಯ ದ ಅಬಕಾರಿ ನಿರೀಕ್ಷಕರು ರತ್ನಾಕರ್ ರೈ ರವರು ನಡೆಸಲಿದ್ದಾರೆ.

hulirasa

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English