ಆಂಬ್ಯುಲೆನ್ಸ್ ಮೂಲಕ ಮೈಸೂರಿಗೆ ಪ್ರಯಾಣ; 7 ಮಂದಿಯನ್ನು ಬಂಧಿಸಿದ ಪೊಲೀಸರು

5:01 PM, Sunday, April 19th, 2020
Share
1 Star2 Stars3 Stars4 Stars5 Stars
(No Ratings Yet)
Loading...

Puttur ಮಂಗಳೂರು: ಆಂಬ್ಯುಲೆನ್ಸ್ ಮೂಲಕ ಪುತ್ತೂರಿನಿಂದ ಮೈಸೂರಿಗೆ ಹೊರಟ 7 ಮಂದಿಯನ್ನು ಪುತ್ತೂರು ಪೊಲೀಸರು ಭಾನುವಾರ ಬಂಧಿಸಿದ್ದಾರೆ.

ಪುತ್ತೂರಿನ ಮಹಮ್ಮದ್ ಜುನೈದ್, ಮಹಮ್ಮದ್ ಇಲ್ಯಾಸ್, ಸಲೀಮುದ್ದೀನ್ ಯಾನೆ ಪಾಪು, ಅಬ್ದುಲ್ ರಜಾಕ್, ರಶೀದ್, ಸಂಶುದ್ದೀನ್, ಮಹಮ್ಮದ್ ಇರ್ಷಾದ್ ಬಂಧಿತರು.

ಲಾಕ್‌ಡೌನ್ ನಿಯಮವನ್ನು ಉಲ್ಲಂಘನೆ ಮಾಡಿ ಪುತ್ತೂರಿನ ಏಳು ಮಂದಿ ಆಂಬ್ಯುಲೆನ್ಸ್ ನಲ್ಲಿ ರಾತ್ರಿ ಮೈಸೂರು ಕಡೆ ಹೊರಟಿದ್ದರು.

ಕೊಡಗು ಜಿಲ್ಲೆಯ ಕುಶಾಲನಗರ ಸರಹದ್ದಿನ ಕೊಪ್ಪದಲ್ಲಿ ಇವರನ್ನು ತಡೆದ ಪೊಲೀಸರು ತಪಾಸಣೆ ಮಾಡಿದಾಗ ಯಾವುದೇ ತುರ್ತು ಸೇವೆಗೆ ಹೋಗದೇ ಲಾಕ್‌ಡೌನ್‌ ನಿಯಮದಿಂದ ತಪ್ಪಿಸಿಕೊಳ್ಳಲು ಹೋಗುತ್ತಿರುವ ವಿಚಾರ ತಿಳಿದಿದೆ. ಆಗ ಅದನ್ನು ಮುಂದೆ ಹೋಗಲು ಬಿಡದೇ ವಾಪಸ್ ಕಳುಹಿಸಿದ್ದರು.

ಪುತ್ತೂರು ಪೊಲೀಸರು ಅಂಬ್ಯುಲೆನ್ಸ್ನಲ್ಲಿದ್ದ ಏಳು ಮಂದಿಯನ್ನ ಬಂಧಿಸಿ, ಆರೋಪಿಗಳ ವಿರುದ್ಧ ಸುಮೊಟೋ ಪ್ರಕರಣ ದಾಖಲಿಸಿದ್ದಾರೆ.

Puttur

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English