[1]ಮಂಗಳೂರು : ಬಂಟ್ವಾಳ ಕಸ್ಬಾ ನಿವಾಸಿ 50 ವರ್ಷದ ಮಹಿಳೆಯೊಬ್ಬರು ಕೋವಿಡ್ ಸೋಂಕಿಗೆ ತುತ್ತಾಗಿ ತೀವ್ರ ಉಸಿರಾಟದ ತೊಂದರೆಯಿಂದ ಭಾನುವಾರ ಮಂಗಳೂರಿನಲ್ಲಿ ಬೆಳಿಗ್ಗೆ 9.15 ಕ್ಕೆ ನಿಧನ ಹೊಂದಿದ್ದಾರೆ. ಇದು ದಕ್ಷಿಣ ಕನ್ನಡದಲ್ಲಿ ಕೋವಿಡ್ ಸೋಂಕಿನ ಮೊದಲ ಬಲಿ ಎನ್ನಲಾಗಿದೆ.
ಮಹಿಳೆ ಉಸಿರಾಟದ ತೊಂದರೆಯಿಂದ ಶನಿವಾರ ಸಂಜೆ ವೆನ್ ಲಾಕ್ ಆಸ್ಪತ್ರೆಗೆ ದಾಖಲಾಗಿದ್ದರು. ತೀವ್ರನಿಗಾದಲ್ಲಿದ್ದ ಅವರು ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆಂದು ಜಿಲ್ಲಾಧಿಕಾರಿಯವರ ಪ್ರಕಟಣೆ ತಿಳಿಸಿದೆ.
ಮೃತರ ಗಂಟಲು ದ್ರವ ಪರೀಕ್ಷೆಯ ವರದಿ ಭಾನುವಾರ ಮಧ್ಯಾಹ್ನ ಸಿಗುವ ಮೊದಲೇ ಸಾವನ್ನಪ್ಪಿದ್ದಾರೆ. ರೋಗಿಗೆ ಕೋವಿಡ್ 19 ಸೋಂಕು ದೃಡ ಪಟ್ಟಿರುವುದರಿಂದ ವೈದ್ಯಕೀಯ ಶಿಷ್ಟಾಚಾರದಂತೆ ಅರೋಗ್ಯ ಇಲಾಖೆ ಅಧಿಕಾರಿಗಳ ಮಾರ್ಗದರ್ಶಶನದಂತೆ ಶವ ಸಂಸ್ಕಾರ ನಡೆಯಲಿದೆಯೆಂದು ಜಿಲ್ಲಾಧಿಕಾರಿಯವರು ತಿಳಿಸಿದ್ದಾರೆ.