ಕಸಬ್ ಗೆ ಗಲ್ಲು ಎಬಿವಿಪಿ ವತಿಯಿಂದ ವಿಜಯೋತ್ಸವ

6:21 PM, Wednesday, November 21st, 2012
Share
1 Star2 Stars3 Stars4 Stars5 Stars
(5 rating, 1 votes)
Loading...

ABVP celebrated Vijayotsavಮಂಗಳೂರು : ಮುಂಬೈ ದಾಳಿಯಲ್ಲಿ ಬಂಧನಕ್ಕೊಳಗಾದ, ಲಷ್ಕರ್‌-ಇ-ತೊಯ್ಬಾ ಸಂಘಟನೆಯವನಾದ ಅಜ್ಮಲ್‌ ಕಸಬ್‌ ನನ್ನು ಇಂದು ಮುಂಜಾನೆ 7.30ಕ್ಕೆ ಪುಣೆಯಲ್ಲಿರುವ ಯರವಾಡ ಜೈಲಿನಲ್ಲಿ ಗಲ್ಲಿಗೇರಿಸಿರುವುದಕ್ಕಾಗಿ ಇಂದು ಕೆಪಿಟಿ ಬಳಿಯ ಬಸವೇಶ್ವರ ವೃತ್ತದಲ್ಲಿ ಎಬಿವಿಪಿ ವತಿಯಿಂದ ವಿಜಯೋತ್ಸವವನ್ನು ಆಚರಿಸಲಾಯಿತು.

ಎಬಿವಿಪಿ ರಾಜ್ಯ ಕಾರ್ಯದರ್ಶಿ ರಮೇಶ್.ಕೆ ಮಾತನಾಡಿ ಕಸಬ್ ನನ್ನು ಗಲ್ಲಿಗೇರಿಸಿರುವುದು ಅಭಿನಂದನಾರ್ಹ ವಿಷಯವಾಗಿದ್ದು , ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಹಾಗೂ ಕೇಂದ್ರ ಸರಕಾರವನ್ನು ಅಭಿನಂದಿಸುತ್ತೇನೆ ಎಂದರು. ಕಸಬ್ ನನ್ನು ಗಲ್ಲಿಗೇರಿಸಿರುವುದು ಉಗ್ರಗಾಮಿಗಳ ವಿರುದ್ಧ ಸಿಕ್ಕ ಜಯ ಹಾಗೂ ದೇಶದ್ರೋಹಿಗಳಿಗೆ ಬೆಂಬಲ ಕೊಡುವ ಸಂಘಟನೆಗಳಿಗೆ ನಿಷೇಧ ಹೇರಬೇಕು ಎಂದವರು ಹೇಳಿದರು.

ಈ ಸಂದರ್ಭದಲ್ಲಿ ಎಬಿವಿಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂತಸವನ್ನು ವ್ಯಕ್ತಪಡಿಸಿದರು. ನಗರ ಸಂಘಟನ ಕಾರ್ಯದರ್ಶಿ ವಿನಯ್ ಹೊರಟ್ಟಿ ಹಾಗೂ ಎಬಿವಿಪಿ ಕಾರ್ಯಕರ್ತರು ಉಪಸ್ಥಿತರಿದ್ದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English