ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ವಿ. ಪೊನ್ನುರಾಜ್‌ ಮತ್ತೆ ಜಿಲ್ಲೆಗೆ

5:33 PM, Friday, May 1st, 2020
Share
1 Star2 Stars3 Stars4 Stars5 Stars
(No Ratings Yet)
Loading...

v-ponnurajಮಂಗಳೂರು: ಕೋವಿಡ್‌-19 ನಿಯಂತ್ರಣ ಸಂಬಂಧ ದಕ್ಷಿಣ ಕನ್ನಡ ಜಿಲ್ಲೆಗೆ ನಿಯೋಜನೆಗೊಂಡಿರುವ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ವಿ. ಪೊನ್ನುರಾಜ್‌ ಅವರು ಜಿಲ್ಲೆಗೆ ಮರಳಿ ಬಂದಿದ್ದು, ಜಿಲ್ಲೆಯ ಅಧಿಕಾರಿಗಳಿಗೆ ಮಾರ್ಗದರ್ಶನ ನೀಡುತ್ತಿದ್ದಾರೆ.

ಜಿಲ್ಲೆಯಲ್ಲಿ ಕೋವಿಡ್‌-19 ಪ್ರಕರಣ ವರದಿಯಾಗುತ್ತಿದ್ದಂತೆ ಬೆಂಗಳೂರಿನಿಂದ ಮಂಗಳೂರಿಗೆ ಆಗಮಿಸಿ ರೋಗ ಹರಡ ದಂತೆ ಜಿಲ್ಲಾಡಳಿತದ ಜತೆ ಮೇಲಿಂದ ಮೇಲೆ ಸಭೆಗಳನ್ನು ನಡೆಸಿ ಕೆಲವೊಂದು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದ ಪೊನ್ನುರಾಜ್‌ ಬಳಿಕ ಜಿಲ್ಲೆಯಲ್ಲಿ ಕಾಣಿಸಿ ಕೊಂಡಿರಲಿಲ್ಲ. ಕೋವಿಡ್‌-19 ದಿಂದ ಎರಡು ಸಾವು ಸಂಭವಿಸಿ ಅಂತ್ಯಕ್ರಿಯೆಗೆ ಜಿಲ್ಲಾಡಳಿತ ಹೆಣಗಾಡುವ ಪರಿಸ್ಥಿತಿ ಎದುರಾದಾಗ ಅನುಭವಿ ಆಡಳಿತಗಾರ ಪೊನ್ನುರಾಜ್‌ ಅವರ ಅನುಪಸ್ಥಿತಿ ಎದ್ದು ಕಂಡಿತ್ತು.

ಕೆಲವು ದಿನಗಳಿಂದ ಬೆಂಗಳೂರಿನ ಕಚೇರಿ ಯಿಂದಲೇ ಜಿಲ್ಲೆಯ ಪರಿಸ್ಥಿತಿ ಮೇಲೆ ನಿಗಾ ಇರಿಸಿದ್ದ ಅವರು ಮತ್ತೆ ಜಿಲ್ಲೆಗೆ ಆಗಮಿಸಿ ಎರಡು ದಿನಗಳಿಂದ ಮಾರ್ಗದರ್ಶನ ನೀಡುತ್ತಿದ್ದಾರೆ. ಇದೀಗ ಮತ್ತೆ ಅವರು ಆಯಕಟ್ಟಿನ ಹಾಗೂ ಸಮಸ್ಯಾತ್ಮಕ ಪ್ರದೇಶ ಗಳಿಗೆ ಭೇಟಿ ನೀಡಿ ಪರಿಸ್ಥಿತಿಯ ಅವಲೋಕನ ನಡೆಸುತ್ತಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English