- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಮೇ 4 ರಿಂದ ಮೂರನೇ ಹಂತದ ಲಾಕ್ ಡೌನ್ ಮುಂದುವರೆರಿಕೆ, ಬೆಳಿಗ್ಗೆ 7 ರಿಂದ ಸಂಜೆ 7 ಗಂಟೆಯವರೆಗೆ ಸೀಮಿತ ಸಡಿಲಿಕೆ

sindhu roopesh [1]ಮಂಗಳೂರು : ಕೊರೋನಾ ವೈರಸ್ ತಡೆಯುವ ನಿಟ್ಟಿನಲ್ಲಿ ಮೇ.4 ರಿಂದ ಮೂರನೇ ಹಂತದ ಲಾಕ್ ಡೌನ್ ಮುಂದುವರೆದಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 9 ಕೊರೋನಾ ಪ್ರಕರಣಗಳು ಸಕ್ರಿಯವಾಗಿದ್ದು 8 ವಲಯಗಳನ್ನು ಸಂಪೂರ್ಣ ನಿರ್ಬಂಧದಲ್ಲಿ ಇಡಲಾಗಿದೆ ಇಲ್ಲಿ ಯಾವುದೇ ಸಡಿಲಿಕೆ ನೀಡಿಲ್ಲ ಮೇ.17ರ ವರೆಗೆ ಲಾಕ್ ಡೌನ್ ಮುಂದುವರೆಯಲಿದೆ.

ಆದರೆ ರಾಜ್ಯ ಸರ್ಕಾರ ಕೆಲವೊಂದು ಪ್ರದೇಶಗಳಲ್ಲಿ ಲಾಕ್ ಡೌನ್ ಸಡಿಲಿಕೆ ಮಾಡಿದ್ದು, ದ.ಕ. ಜಿಲ್ಲೆಯಲ್ಲೂ ಲಾಕ್ ಡೌನ್ ಸಡಿಲಿಕೆ ಮಾಡಲಾಗಿದೆ. ಅದರಂತೆ ಬೆಳಿಗ್ಗೆ 7 ಗಂಟೆಯಿಂದ ಸಂಜೆ 7 ಗಂಟೆಯ ವರೆಗೆ ಓಡಾಟಕ್ಕೆ ಅವಕಾಶವಿದೆ.

ಜಿಲ್ಲೆಯಾದ್ಯಂತ ಆಟೋ ರಿಕ್ಷಾ, ಕ್ಯಾಬ್ ಸಂಚಾರಕ್ಕೆ ಅನುಮತಿ ನೀಡಲಾಗಿದೆ. ಆದರೆ ಆಟೋ ಮತ್ತು ಕ್ಯಾಬ್ ಗಳಲ್ಲಿ ಚಾಲಕ ಮತ್ತು ಇಬ್ಬರು ಪ್ರಯಾಣಿಕರಿಗೆ ಮಾತ್ರ ಅವಕಾಶ ನೀಡಲಾಗಿದೆ.

ಖಾಸಗಿ ವಾಹನಗಳಾದ ಬೈಕ್ ಮತ್ತು ಕಾರುಗಳ ಸಂಚಾರಕ್ಕೂ ಅನುಮತಿ ನೀಡಿದ್ದು, ಕಾರುಗಳಲ್ಲಿ ಚಾಲಕ ಸೇರಿ ಇಬ್ಬರು ಪ್ರಯಾಣಿಕರು ಮತ್ತು ಬೈಕ್ ಗಳಲ್ಲಿ ಒಬ್ಬರಷ್ಟೇ ಪ್ರಯಾಣಿಸಲು ಅವಕಾಶವಿದೆ.

ಆಸ್ಪತ್ರೆ, ಕ್ಲಿನಿಕ್, ಅಂಗಡಿಗಳು, ವಸತಿ ಸಂಕೀರ್ಣಗಳ ಶಾಪ್, ಸಣ್ಣಪುಟ್ಟ ಶಾಪ್ ಗಳನ್ನು ತೆರೆಯಲು ಅನುಮತಿ ನೀಡಲಾಗಿದೆ. ಖಾಸಗಿ ಸಂಸ್ಥೆ ಮತ್ತು ಕಚೇರಿಗಳಲ್ಲಿ 33% ಸಿಬ್ಬಂದಿ ಬಳಸಿ ಕೆಲಸ ಮಾಡಲು ಅವಕಾಶ ಮಾಡಿಕೊಡಲಾಗಿದೆ. ಅಗತ್ಯ ಸೇವೆಗಳಿಗೆ ಇ-ಕಾಮರ್ಸ್ ಸಂಸ್ಥೆಗಳಿಗೆ ಅವಕಾಶ ನೀಡಲಾಗಿದೆ. ಅಗತ್ಯ ಕಟ್ಟಡ ಕಾಮಗಾರಿ ನಡೆಸಲು ಅವಕಾಶ ನೀಡಿದ್ದು, ಸ್ಥಳದಲ್ಲಿದ್ದ ಕಾರ್ಮಿಕರ ಬಳಕೆಗೆ ಸೂಚನೆ ನೀಡಿದ್ದು, ಹೊರಗಿನಿಂದ ಕಾರ್ಮಿಕರು ಬರುವಂತಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಮಾರುಕಟ್ಟೆ ಮತ್ತು ಮಾರುಕಟ್ಟೆ ಸಂಕೀರ್ಣಗಳಲ್ಲಿ ಅಗತ್ಯ ವಸ್ತುಗಳ ಅಂಗಡಿ ತೆರೆಯಲಷ್ಟೇ ಅನುಮತಿ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ.

ಮದ್ಯದಂಗಡಿ , ವೈನ್ ಶಾಪ್ ಗಳಲ್ಲಿ ಪಾರ್ಸೆಲ್ ಸರ್ವಿಸ್ ಗೆ ಅವಕಾಶವಿದೆ.

65 ವರ್ಷ ಮೇಲ್ಪಟ್ಟವರು 10 ವಯಸ್ಸಿನಿಂದ ಕೆಳಪಟ್ಟ ಮಕ್ಕಳು ಮನೆಯಿಂದ ಹೊರಗೆ ಬರುವಂತಿಲ್ಲ.

ಸಾರ್ವಜನಿಕ ಬಸ್ , ವಿಮಾನ , ರೈಲು, ಶಿಕ್ಷಣ ಸಂಸ್ಥೆ, ಕೋಚಿಂಗ್ ಕ್ಲಾಸ್ , ಹೊಟೇಲ್ ಬಾರ್, ರೆಸ್ಟೋರೆಂಟ್, ಮಾಲ್, ಸಿನಿಮಾ ಮಂದಿರ, ಜಿಮ್, ಕ್ರೀಡಾ ಸಂಕೀರ್ಣ, ಕ್ಲಬ್, ಸ್ವಿಮ್ಮಿಂಗ್ ಫೂಲ್, ಪಾರ್ಕ್, ಸೆಲೂನ್, ಸ್ಪಾ, ಬ್ಯೂಟಿ ಪಾರ್ಲರ್, ಟೆಕ್ಸ್ ಟೈಲ್ಸ್ ಮತ್ತು ಬಟ್ಟೆ ಅಂಗಡಿಗಳು ಬಂದ್ ಇರಲಿವೆ. ಸಾಮಾಜಿಕ, ಧಾರ್ಮಿಕ, ಸಾಂಸ್ಕೃತಿಕ ಸೇರಿ ಜನ ಸೇರುವ ಎಲ್ಲಾ ಕಾರ್ಯಕ್ರಮಗಳನ್ನು ನಿಷೇದಿಸಲಾಗಿದೆ. ಸಂಜೆ. 7 ರಿಂದ ಬೆಳಿಗ್ಗೆ .7ರ ವರೆಗೆ ಎಲ್ಲಾ ರೀತಿಯ ಸಂಚಾರ, ಸೇವೆ ಬಂದ್ ಮಾಡಲು ಆದೇಶಿಸಿದೆ.