ದುಬಾೖಯಿಂದ ಕನ್ನಡಿಗರನ್ನು ಹೊತ್ತ ಇನ್ನೊಂದು ವಿಮಾನ ಮೇ 18ರಂದು ಬರಲಿದೆ

11:58 AM, Sunday, May 17th, 2020
Share
1 Star2 Stars3 Stars4 Stars5 Stars
(No Ratings Yet)
Loading...

airIndia ಮಂಗಳೂರು: ದುಬಾೖಯಿಂದ ಕನ್ನಡಿಗರನ್ನು ಹೊತ್ತ ಇನ್ನೊಂದು ವಿಮಾನ ಮೇ 18ರಂದು ಸಂಜೆ 6.30ಕ್ಕೆ ಮಂಗಳೂರಿಗೆ ಆಗಮಿಸಲಿದೆ ಎಂದು ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್‌ ತಿಳಿಸಿದ್ದಾರೆ.

ವಿಮಾನದಲ್ಲಿ ಎಷ್ಟು ಪ್ರಯಾಣಿಕರಿರುತ್ತಾರೆ ಎಂಬ ನಿಖರ ಮಾಹಿತಿ ದೊರಕಿಲ್ಲ. ಪ್ರಯಾಣಿಕರಿಗೆ ಮಂಗಳೂರಿನಲ್ಲಿ ಸೂಕ್ತ ಕ್ರಮ ಕೈಗೊಳ್ಳುವಂತೆ ವಿಮಾನ ನಿಲ್ದಾಣ ಪ್ರಾಧಿಕಾರಕ್ಕೆ ಸೂಚಿಸಲಾಗಿದೆ. ಪ್ರಯಾಣಿಕರು ಕೂಡ ಜಿಲ್ಲಾಡಳಿತಕ್ಕೆ ಸಹಕಾರ ನೀಡಬೇಕು ಎಂದು ಜಿಲ್ಲಾಧಿಕಾರಿ ಕೋರಿದರು.

ಮೇ 20 ಮಸ್ಕತ್‌ನಿಂದ ಹಾಗೂ 22ರಂದು ದೋಹಾದಿಂದ ಬೆಂಗಳೂರಿನ ಮೂಲಕ ಮಂಗಳೂರಿಗೆ ವಿಮಾನ ಬರುವ ಮಾಹಿತಿಯಿತ್ತು. ಆದರೆ ಸದ್ಯದ ಮಾಹಿತಿ ಪ್ರಕಾರ ಈ ವಿಮಾನಗಳು ಬೆಂಗಳೂರಿಗೆ ಮಾತ್ರ ಬರಲಿವೆ ಎಂದು ಮಂಗಳೂರು ನಿಲ್ದಾಣದ ಮೂಲಗಳು ತಿಳಿಸಿವೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English