[1]ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮೀಪ್ರಸಾದ್ ಅವರು ಪ್ರತಿಕ್ರಿಯಿಸಿ “ವಿಟ್ಲ ಪೊಲೀಸ್ ಠಾಣೆಯನ್ನು ವಿಟ್ಲ ಪಟ್ಟಣ ಪಂಚಾಯತ್ ವತಿಯಿಂದ ಸಂಪೂರ್ಣವಾಗಿ ಸ್ಯಾನಿಟೈಸ್ ಮಾಡಲಾಗಿದೆ ಹಾಗೂ ರವಿವಾರದಿಂದ ಎರಡು ದಿನಗಳ ಕಾಲ ಪೊಲೀಸ್ ಠಾಣೆಯನ್ನು ಮುಚ್ಚಲಾಗಿದೆ ಎಂದಿದ್ದಾರೆ.
ವಿಟ್ಲ ಪೊಲೀಸ್ ಠಾಣೆಯಲ್ಲಿ ಒಟ್ಟು 40 ಮಂದಿ ಸಿಬಂದಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಕೊರೊನಾ ಸೋಂಕಿತ ವ್ಯಕ್ತಿಯ ಜತೆ ಪ್ರಾಥಮಿಕ ಸಂಪರ್ಕ ಇರುವವರನ್ನು ಸಾಂಸ್ಥಿಕ ಕ್ವಾರಂಟೈನ್ಗೆ ಒಳಪಡಿಸಲಾಗುತ್ತದೆ. ಉಳಿದವರನ್ನು ಗೃಹ ನಿಗಾವಣೆಗೆ ಸೂಚನೆ ನೀಡಲಾಗಿದೆ. ಎಷ್ಟು ಮಂದಿ ಸಂಪರ್ಕಿತರು ಎಂಬ ಬಗ್ಗೆ ಆರೋಗ್ಯ ಇಲಾಖೆ ಮಾಹಿತಿ ನೀಡಲಿದೆ. ಎಲ್ಲ ಪೊಲೀಸರಿಗೆ ಈಗಾಗಲೇ ಟ್ರಿಪಲ್ ಲೇಯರ್ ಮಾಸ್ಕ್ ನೀಡಲಾಗಿದೆ. ಆರೋಪಿ ಹಿಡಿಯುವ ಸಂದರ್ಭದಲ್ಲಿ ವಿಶೇಷ ಗ್ಲೌಸ್ ಮತ್ತು ಪಿಪಿಇ ಕಿಟ್ ಧರಿಸಲು ಸೂಚನೆ ನೀಡಲಾಗಿದೆ’ ಎಂದು ತಿಳಿಸಿದ್ದಾರೆ.