- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಬಿಜೆಪಿ ಪ್ರಮುಖರೊಂದಿಗೆ ಕೇಂದ್ರ ಸಚಿವ ಜೋಶಿ ಸಂವಾದ

prahalada-joshi [1]ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಮೆ.25 ಸೋಮವಾರ ನವದೆಹಲಿಯಿಂದ ಧಾರವಾಡದ ವಿಭಾಗದ ಬಿಜೆಪಿ ಪ್ರಮುಖರೊಂದಿಗೆ ವೀಡಿಯೋ ಕಾನ್ಫರೆನ್ಸ ಮುಖಾಂತರ ಸಂವಾದದಲ್ಲಿ ಪಾಲ್ಗೊಂಡರು.

ಸಂವಾದದಲ್ಲಿ ಆತ್ಮ ನಿರ್ಭರ ಭಾರತ ಕುರಿತಾಗಿತ್ತು. ಪ್ರಧಾನಿ ನರೇಂದ್ರ ಮೋದಿ ಕೊರೋನಾ ಹಿನ್ನೆಲೆಯಲ್ಲಿ ದೇಶದ ನಾಗರಿಕರಿಗಾಗಿ ಅವರು ಬಿಡುಗಡೆ ಮಾಡಿದ 20 ಲಕ್ಷ ಕೋಟಿ ರೂಪಾಯಿ ವಿಶೇಷ ಪ್ಯಾಕೇಜ್ ಕುರಿತು ಕೂಡಾ ಆಗುತ್ತಿರುವ ಚಟುವಟಿಕೆಗಳ ಬಗ್ಗೆ ಈ ಸಂದರ್ಭದಲ್ಲಿ ಚರ್ಚಿಸಲಾಯಿತು.
ಸಂವಾದದ ನೇತೃತ್ವವನ್ನು ಕೇಂದ್ರ ಸಚಿವರಾದ ಅರ್ಜುನ್ ರಾಮ್ ಮೇಘವಾಲ್ ಅವರು ವಹಿಸಿದ್ದರು.

ವರದಿ : ಹುಬ್ಬಳ್ಳಿ ಪ್ರತಿನಿಧಿಯಿಂದ