ಜೂನ್ 1ರಿಂದ ರಾಜ್ಯದ ದೇವಸ್ಥಾನ ತೆರೆಯಲು ಸರ್ಕಾರ ಸಮ್ಮತಿ

7:05 PM, Tuesday, May 26th, 2020
Share
1 Star2 Stars3 Stars4 Stars5 Stars
(No Ratings Yet)
Loading...

Srinivas poojary ಮಂಗಳೂರು : ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದರೂ ಜೂನ್ 1ರಿಂದ ರಾಜ್ಯದ ದೇವಸ್ಥಾನಗಳನ್ನು ತೆರೆಯಲು ಸರ್ಕಾರ ಅವಕಾಶ ನೀಡಿದೆ.

ಸಿಎಂ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ದೇವಸ್ಥಾನ ಗಳನ್ನು ತೆರೆಯುವುದರ ಕುರಿತು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಹೇಳಿದ್ದಾರೆ.

ಇನ್ನು ಸದ್ಯಕ್ಕೆ ಜಾತ್ರೆ, ಸಮಾರಂಭಗಳಿಗೆ ಅವಕಾಶ ಇಲ್ಲ ನೀಡಲಾಗಿಲ್ಲ. ದೇವಸ್ಥಾನಗಳಲ್ಲಿ ಭಕ್ತರು ಕಡ್ಡಾಯವಾಗಿ ಸಾಮಾಜಿಕ ಅಂತರ ಪಾಲನೆ ಮಾಡಬೇಕಿದೆ ಎಂದರು.

ನಾಳೆಯಿಂದ ರಾಜ್ಯ 52 ದೇವಸ್ತಾನಗಳ ಆನ್ ಲೈನ್ ಸೇವೆಗೆ ಅವಕಾಶ ನೀಡಲಾಗಿದೆ ಎಂದ ಅವರು ಮಸೀದಿ, ಚರ್ಚ್ ತೆರೆಯುವ ಬಗ್ಗೆ ಇನ್ನು ನಿರ್ಧಾರವಾಗಿಲ್ಲ ಎಂದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English