ಕುಸಿದು ಬಿದ್ದು ಮೃತಪಟ್ಟ ಹೋಟೆಲು ಕಾರ್ಮಿಕ, ಕೊರೊನಾ ಎಂದು ವದಂತಿ

11:56 AM, Friday, May 29th, 2020
Share
1 Star2 Stars3 Stars4 Stars5 Stars
(No Ratings Yet)
Loading...

dead bodyಉಪ್ಪಿನಂಗಡಿ : ಮನೆಯವರಿಂದ ದೂರವಾಗಿದ್ದ ಉಡುಪಿ ಮೂಲದ 56 ವರ್ಷ ವ್ಯಕ್ತಿಯೋರ್ವ ಪರಿಚಯಸ್ಥರ ಮನೆಯಲ್ಲಿ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ  ಪುತ್ತೂರು ತಾಲೂಕಿನ ನೆಕ್ಕಿಲಾಡಿ ಗ್ರಾಮದ ದರ್ಬೆಯಲ್ಲಿ ಬುಧವಾರ ನಡೆದಿದೆ.

ಮೃತ ವ್ಯಕ್ತಿ ಉಪ್ಪಿನಂಗಡಿಯ ಹೊಟೇಲ್‌‌ವೊಂದರಲ್ಲಿ ಕಾರ್ಮಿಕರಾಗಿದ್ದರು. ಲಾಕ್ ಡೌನ್ ಕಾರಣದಿಂದ ಹೊಟೇಲ್‌‌ ಮುಚ್ಚಿದ ಕಾರಣ ಕಾರಣ ಅವರು ನೆಕ್ಕಿಲಾಡಿಯ ಪರಿಚಯಸ್ಥರ ಮನೆಯಲ್ಲಿದ್ದರು.

ಈ ನಡುವೆ ಅವರು ಜ್ವರದಿಂದ ಬಳಲುತ್ತಿದ್ದರು ಎಂದು ಯಾರೋ ವದಂತಿ ಹಬ್ಬಿಸಿದ್ದು, ಕೊರೊನಾ ಭಯದಿಂದಾಗಿ ಯಾರೂ ಕೂಡಾ ಶವದ ಬಳಿ ಬರಲು ಒಪ್ಪದೆ  ಹೆಣ ಬೀದಿಯಲ್ಲಿಯೇ ಉಳಿಯುವಂತಾಯಿತು.

ತಂದೆ ಮೃತಪಟ್ಟ ವಿಷಯ ತಿಳಿದು ಅವರ ಪುತ್ರನೂ ಸಂಜೆಯ ವೇಳೆ ನೆಕ್ಕಿಲಾಡಿಗೆ ಬಂದಿದ್ದರು. ಆದರೆ, ಯಾರೂ ಸಹಾಯಕ್ಕೆ ಬಾರದೇ ಇದ್ದು, ಶವ ಸಂಸ್ಕಾರವನ್ನೂ ಮಾಡಲೂ ಆಗದೇ, ಶವವನ್ನು ಊರಿಗೆ ಸಾಗಿಸಲು ಆಗದೇ, ಅಸಹಾಯಕರಾಗಿ ಪೊಲೀಸ್‌ ಠಾಣೆಯ ಬಾಗಿಲಿನಲ್ಲಿ ಕಾಯುವ ಪರಿಸ್ಥಿತಿ ಎದುರಾಯಿತು. ಅಲ್ಲದೇ, ಕಂದಾಯ, ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಫೋನ್‌‌ ಕರೆ ಮಾಡಿದರು ಪ್ರಯೋಜನವಾಗಲಿಲ್ಲ.

ನಂತರ ಮೃತರ ಪುತ್ರನ ಸಂಕಷ್ಟವನ್ನು ತಿಳಿದ ಉಪ್ಪಿನಂಗಡಿ ಎಸ್‌‌ಐ ಈರಯ್ಯ ಅವರು, ಖಾಸಗಿ ಆಂಬುಲೆನ್ಸ್‌‌‌ ಚಾಲಕನ ಮನವೊಲಿಸಿ, ಆತನಿಗೆ ಪೊಲೀಸರಿಗೆ ನೀಡಲಾದ ಪಿಪಿಇ ಉಡುಪನ್ನು ತೊಡಿಸಿ ಬಳಿಕ ಶವವನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ಸಾಗಿಸುವಂತೆ ಮಾಡಿದರು. ನಂತರ ಮೃತನ ಗಂಟಲ ದ್ರವದ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ಫಲಿತಾಂಶ ಬಂದ ನಂತರ ಅಂತ್ಯಕ್ರಿಯೆ ನಡೆಯಲಿದೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English