ಮಂಗಳೂರು : ಶುಕ್ರವಾರ 170 ಮಂದಿಯ ಗಂಟಲ ದ್ರವ ಪರೀಕ್ಷೆಗೆ ರವಾನೆ, 59 ಸಕ್ರಿಯ ಪ್ರಕರಣಗಳು

9:25 PM, Friday, May 29th, 2020
Share
1 Star2 Stars3 Stars4 Stars5 Stars
(No Ratings Yet)
Loading...

covid-testಮಂಗಳೂರು : ದ.ಕ. ಜಿಲ್ಲೆಯಲ್ಲಿಸುಮಾರು 170 ಮಂದಿಯ ಗಂಟಲ ದ್ರವ ಸ್ಯಾಂಪಲ್ ಗಳನ್ನು ಪರೀಕ್ಷೆಗೆ ರವಾನಿಸಲಾಗಿದೆ. ಒಟ್ಟು  59 ಮಂದಿ ಕೊರೋನಾ ಚಿಕಿತ್ಸೆಯಲ್ಲಿದ್ದಾರೆ.

ಜಿಲ್ಲೆಯಲ್ಲಿ ಶುಕ್ರವಾರದಂದು 581 ಮಂದಿಯ ವರದಿ ಲಭ್ಯವಾಗಿದ್ದು, ಈ ಪೈಕಿ ಯಾವುದೇ ಪಾಸಿಟಿ ವರದಿ ಬಂದಿಲ್ಲ ಎಂದು ದ.ಕ. ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆ ಅಧಿಕೃತ ಮಾಹಿತಿ ನೀಡಿದೆ.

593 ಮಂದಿಯ ವರದಿ ಬರಬೇಕಿದೆ. ಇನ್ನು 11 ಮಂದಿಯನ್ನು ನಿಗಾ ಹಿನ್ನೆಲೆ ಕ್ವಾರಂಟೈನ್ ಕೇಂದ್ರಗಳಿಗೆ ದಾಖಲಿಸಲಾಗಿದೆ.

ಈಗಾಗಲೇ ಜಿಲ್ಲೆಯಲ್ಲಿ 99 ಮಂದಿಯಲ್ಲಿ ಪಾಸಿಟಿವ್ ಕಂಡುಬಂದಿದ್ದು, ಈ ಪೈಕಿ 59 ಮಂದಿ ಸದ್ಯ ಚಿಕಿತ್ಸೆಯಲ್ಲಿದ್ದಾರೆ. ಜಿಲ್ಲೆಯಲ್ಲಿ ಇಲ್ಲಿಯ ತನಕ 36 ಮಂದಿ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. 7 ಮಂದಿ ಚಿಕಿತ್ಸೆಗೆ ಸ್ಪಂಧಿಸದೆ ಸಾವನ್ನಪ್ಪಿದ್ದಾರೆ.

 

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English