- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಅಕ್ರಮ ಗಳಿಕೆ – ಕೆಐಎಡಿಬಿ ವಿಶೇಷ ಅಧಿಕಾರಿಯ ಮೂರು ಮನೆಗಳ ಮೇಲೆ ಎಸಿಬಿ ದಾಳಿ

acb raid [1]ಮಂಗಳೂರು : ಎಸಿಬಿ ಅಧಿಕಾರಿಗಳು ಅಕ್ರಮ ಆಸ್ತಿ ಗಳಿಕೆಗೆ ಸಂಬಂಧಿಸಿದಂತೆ ಕೆಐಎಡಿಬಿ ವಿಶೇಷ ಅಧಿಕಾರಿ ದಾಸೇಗೌಡ ಅವರ ಮಂಗಳೂರು, ಬೆಂಗಳೂರು ಹಾಗೂ ಮಂಡ್ಯದಲ್ಲಿರುವ ಮನೆಗಳ ಮೇಲೆ ಶುಕ್ರವಾರ ದಾಳಿ ನಡೆಸಿದ್ದಾರೆ.

ಕೆಐಎಡಿಬಿ ವಿಶೇಷ ಅಧಿಕಾರಿಯಾಗಿದ್ದ ದಾಸೇಗೌಡ ಭೂಸ್ವಾಧೀನದ ಪರಿಹಾರ ಮೊತ್ತದಲ್ಲಿ ಕಮಿಷನ್ ಪಡೆದು 2019ರ ಡಿಸೆಂಬರ್ ನಲ್ಲಿ ಸಿಕ್ಕಿಬಿದ್ದಿದ್ದರು. ಸದ್ಯ ಲಂಚ ಸ್ವೀಕಾರ ಆರೋಪದಡಿ ಅಮಾನತ್ತಿನಲ್ಲಿದ್ದಾರೆ.

ಆದುದರಿಂದ ವಿಶೇಷ ಅಧಿಕಾರಿಗಳು ದಾಸೇಗೌಡನಿಗೆ ಸೇರಿದ ಮಂಗಳೂರು, ಮಂಡ್ಯ ಮತ್ತು ಬೆಂಗಳೂರು ನಿವಾಸಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ.

ಎಸಿಬಿ ಅಧಿಕಾರಿಗಳಿಂದ ಬಂಧನಕ್ಕೊಳಗಾಗಿ ಜಾಮೀನು ಪಡೆದು ಹೊರಬಂದಿದ್ದ ದಾಸೇಗೌಡ ಸದ್ಯ ರಾಜ್ಯದ ಹಲವೆಡೆ ಅಕ್ರಮ ಆಸ್ತಿ ಇರೋ ಹಿನ್ನೆಲೆಯಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.