ತಂದೆಯನ್ನೇ ಕಡಿದು ಕೊಲೆ ಮಾಡಿದ ಇಬ್ಬರು ದುರುಳ ಮಕ್ಕಳು

6:12 PM, Monday, June 15th, 2020
Share
1 Star2 Stars3 Stars4 Stars5 Stars
(5 rating, 1 votes)
Loading...

murder ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯ ಕರಾಯ ಗ್ರಾಮದ ಮುಗ್ಗದ ಆನೆಪಲ್ಲ ಎಂಬಲ್ಲಿ ತಂದೆಯನ್ನೇ ಇಬ್ಬರು ಮಕ್ಕಳು ಕತ್ತಿಯಿಂದ ಕಡಿದು ಕೊಲೆ ಮಾಡಿದ ಘಟನೆ  ಭಾನುವಾರ  ಮಧ್ಯರಾತ್ರಿ ನಡೆದಿದೆ.

ಧರ್ನಪ್ಪ ಪೂಜಾರಿ (65), ಕೊಲೆಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ.

ಅವರ ಮಕ್ಕಳಾದ ಮೋನಪ್ಪ ಹಾಗೂ ನವೀನ ಎಂಬುವವರು ಕತ್ತಿಯಿಂದ ಕಡಿದು ಕೊಲೆ ಮಾಡಿರುವ ಆರೋಪಿಗಳು.

ಮನೆಯ ಹಿತ್ತಲಿನಲ್ಲಿದ್ದ ತೆಂಗಿನ ಮರದ ತೆಂಗಿನಕಾಯಿ, ಬೊಂಡವನ್ನು ತೆಗೆದು ತಂದೆ ಮಾರಾಟ ಮಾಡುತ್ತಿದ್ದರು. ಇದೇ ವಿಚಾರಕ್ಕೆ ತಂದೆ – ಮಕ್ಕಳಿಬ್ಬರ ಮಧ್ಯೆ ಆಗಾಗ ಜಗಳ ನಡೆಯುತ್ತಿತ್ತು ಎಂದು ತಿಳಿದುಬಂದಿದೆ. ನಿನ್ನೆ ಮಧ್ಯರಾತ್ರಿಯೂ ಇದೇ ವಿಚಾರಕ್ಕೆ ತಂದೆ ಮಕ್ಕಳ ಮಧ್ಯೆ ಜಗಳ ನಡೆದಿದೆ. ಈ ವೇಳೆ ತಂದೆಗೆ ಮಕ್ಕಳು ಕತ್ತಿಯಿಂದ ಕಡಿದಿದ್ದಾರೆ. ಗಂಭೀರ ಗಾಯಗೊಂಡ ಧರ್ನಪ್ಪ ಪೂಜಾರಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಆರೋಪಿಗಳಿಬ್ಬರನ್ನು ಉಪ್ಪಿನಂಗಡಿ ಠಾಣಾ ಪೊಲೀಸರು ಬಂಧಿಸಿದ್ದಾರೆ.

uppinangady

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English