- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಗೆಳತಿಯ ಜೊತೆ ತೆರಳಿ ನಾಪತ್ತೆಯಾಗಿದ್ದ ಯುವತಿ ಪ್ರಿಯಕರನೊಂದಿಗೆ ಪತ್ತೆ

kiran [1]ವಿಟ್ಲ : ಇತ್ತೀಚೆಗೆ ಪೆರುವಾಯಿ ಗ್ರಾಮದ ಕಂಬಕೋಡಿ ಮನೆಯಿಂದ ತನ್ನ ಸ್ನೇಹಿತೆಯೊಂದಿಗೆ ತೆರಳಿ ನಾಪತ್ತೆಯಾಗಿದ್ದ ಯುವತಿ  ಪ್ರಿಯಕರನ ಜತೆ ಬೆಂಗಳೂರಿನಲ್ಲಿ ಮದುವೆಯಾಗಿದ್ದಾಳೆ ಎಂಬ ಮಾಹಿತಿ ವಿಟ್ಲ ಪೊಲೀಸರಿಗೆ ಲಭ್ಯವಾಗಿದೆ.

ಪೆರುವಾಯಿ ಗ್ರಾಮದ ಕಂಬಕೋಡಿ ನಿವಾಸಿಯಾಗಿರುವ ಯುವತಿಯನ್ನು ಮೇ 29ರಂದು ಆಕೆಯ ಸ್ನೇಹಿತೆ ಕರೆದುಕೊಂಡು ತೆರಳಿದ್ದಳು. ಬಳಿಕ ಆಕೆ ನಾಪತ್ತೆಯಾಗಿದ್ದಳು. ಈ ಬಗ್ಗೆ ಆಕೆಯ ತಂದೆ ವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ವಿಟ್ಲ ಪೊಲೀಸರು ನಾಪತ್ತೆ ಪ್ರಕರಣದ ಬೆನ್ನು ಬಿದ್ದಿದ್ದರು.

ನಿರಂತರ ಸೋಧ ನಡೆಸಿದ ಬಳಿಕ ಇದೀಗ ಯುವತಿ ಬೆಂಗಳೂರಿನಲ್ಲಿ ತನ್ನ ಪ್ರಿಯಕರ ಬೆಳ್ತಂಗಡಿ ತಾಲೂಕಿನ ಪುತ್ತಿಲ ಗ್ರಾಮದ ಕಿರಣ್ ಎಂಬಾತನ ಜತೆ ಇರುವ ಬಗ್ಗೆ ಮಾಹಿತಿ ತಿಳಿದುಬಂದಿದೆ. ಅಲ್ಲಿಗೆ ತೆರಳಿದ ವಿಟ್ಲ ಎಸೈ ವಿನೋದ್ ಕುಮಾರ್ ಎಸ್.ಕೆ. ನೇತೃತ್ವದ ಪೊಲೀಸರ ತಂಡ ಬೆಂಗಳೂರಿನ ಮಾರತ್ತಹಳ್ಳಿ ಎಂಬಲ್ಲಿ ಪತ್ತೆ ಹಚ್ಚಿದ್ದಾರೆ