- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಮನೆಮಂದಿಯನ್ನು ಕಟ್ಟಿಹಾಕಿ ಮುಸುಕುಧಾರಿಗಳ ತಂಡದಿಂದ ಚಿನ್ನಾಭರಣ ಮತ್ತು13 ಲಕ್ಷ ನಗದು ದರೋಡೆ

Achuta Bhat [1]ಬೆಳ್ತಂಗಡಿ  : ರಾತ್ರಿ ಹೊತ್ತು ನಾಯಿ ಬೊಗಳಿದ ಶಬ್ದ ಕೇಳಿ ಬಾಗಿಲು ತೆಗೆದಾಗ ನಾಲ್ವರು ಮುಸುಕುಧಾರಿಗಳ ತಂಡವೊಂದು ಮನೆಯೊಳಗೆ ನುಗ್ಗಿ ಮನೆಮಂದಿಯನ್ನು ಕಟ್ಟಿಹಾಕಿ ಚಿನ್ನಾಭರಣ ದೋಚಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಬಳಿ ನಡೆದಿದೆ.

ಧರ್ಮಸ್ಥಳ ಗ್ರಾಮದ ನೀರಚಿಲುವೆ ಬಳಿಯ ಅಚ್ಯುತ ಭಟ್ ಎಂಬುವವರ ಮನೆಯಲ್ಲಿ ಈ ಘಟನೆ ನಡೆದಿದೆ. ಗುರುವಾರ  ಮಧ್ಯರಾತ್ರಿ ಸುಮಾರು 2.30 ರ ಸುಮಾರಿಗೆ ಮನೆಗೆ ನುಗ್ಗಿದ ಕಳ್ಳರು ಮನೆ ಮಂದಿಯನ್ನು‌ ಕಟ್ಟಿ ಹಾಕಿ ಸುಮಾರು 13 ಲಕ್ಷ ನಗದು ಸಹಿತ 40 ಪವನ್ ಚಿನ್ನ ಹಾಗೂ1 ಕೆಜಿ ಬೆಳ್ಳಿಯ ಆಭರಣಗಳನ್ನು ದರೋಡೆ ಮಾಡಿದ್ದಾರೆ.

ಅಚ್ಯುತ ಭಟ್ ರವರು ಉಜಿರೆಯಲ್ಲಿ ಅಡಿಕೆ ವ್ಯಾಪಾರ ನಡೆಸುತ್ತಿದ್ದಾರೆ.

ಮನೆಮಂದಿಯನ್ನು ಕಟ್ಟಿ ಹಾಕಿದ ದರೋಡೆಕೋರರ ತಂಡ  ಪೊಲೀಸರಿಗೆ ಈ ಬಗ್ಗೆ ತಿಳಿಸಿದರೆ ಜೀವಹಾನಿ ಮಾಡುದಾಗಿ ಎಚ್ಚರಿಕೆ ನೀಡಿ ಸ್ಥಳದಿಂದ ಪರಾರಿಯಾಗಿದ್ದಾರೆ.

ಘಟನಾ ಸ್ಥಳಕ್ಕೆ ಬೆಳ್ತಂಗಡಿ ಮತ್ತು ಧರ್ಮಸ್ಥಳ ಪೊಲೀಸರು ಆಗಮಿಸಿ ಸ್ಥಳ ಪರಿಶೀಲನೆ ನಡೆಸಿದ್ದಾರೆ.

Achuta Bhat [2]

Achuta Bhat [3]