ಮಂಗಳೂರು ನಗರ ಪೊಲೀಸ್ ಆಯುಕ್ತ ಡಾ. ಪಿ.ಎಸ್. ಹರ್ಷ ಬೆಂಗಳೂರಿಗೆ ವರ್ಗಾವಣೆ

11:08 PM, Friday, June 26th, 2020
Share
1 Star2 Stars3 Stars4 Stars5 Stars
(No Ratings Yet)
Loading...

Harsha IPS ಮಂಗಳೂರು : ಮಂಗಳೂರು ನಗರ ಪೊಲೀಸ್ ಆಯುಕ್ತ ಡಾ. ಪಿ.ಎಸ್. ಹರ್ಷ ಐಪಿಎಸ್., ಅವರು ಡೆಪ್ಯೂಟಿ ಇನ್ಸ್‌ಪೆಕ್ಟರ್ ಜನರಲ್ (ಡಿಐಜಿ) ಮತ್ತು ಕಮಿಷನರ್, ಆಗಿ ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕಇಲಾಖೆ, ಬೆಂಗಳೂರಿಗೆ ವರ್ಗಾವಣೆಗೊಂಡಿದ್ದು, ತೆರವಾದ ಸ್ಥಾನಕ್ಕೆ ವಿಕಾಸ್ ‌ಕುಮಾರ್ ಅವರನ್ನು ನೇಮಕಗೊಳಿಸಿ ರಾಜ್ಯ ಸರಕಾರ ಶುಕ್ರವಾರ ಆದೇಶ ಹೊರಡಿಸಿದೆ.

ನಕ್ಸಲ್ ನಿಗ್ರಹ ಪಡೆಯ ಆಯುಕ್ತರಾಗಿದ್ದ ವಿಕಾಸ್ ‌ಕುಮಾರ್ ಅವರನ್ನು ಮಂಗಳೂರು ಪೊಲೀಸ್ ಆಯುಕ್ತರನ್ನಾಗಿ ನೇಮಕ ಮಾಡಲಾಗಿದ್ದು, ತಕ್ಷಣದಿಂದಲೇ ಜಾರಿ ಬರುವಂತೆ ಆದೇಶ ಹೊರಡಿಸಲಾಗಿದೆ.

ಸರ್ಕಾರಿ ಸಚಿವಾಲಯದ ಆದೇಶದ ಪ್ರಕಾರ 24 ಐಪಿಎಸ್ ಅಧಿಕಾರಿಗಳನ್ನು ಜೂನ್ 26 ರ  ರಂದು ವರ್ಗಾಯಿಸಲಾಗಿದೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English