[1]ಮಂಗಳೂರು: ಮಂಗಳೂರಿನಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆ ಮಂಗಳೂರು ನಗರ ಪಾಲಿಕೆಗೆ ಸೋಮವಾರದಿಂದ ಪ್ರವೇಶ ನಿರ್ಬಂಧಿಸ ಲಾಗಿದೆ ಎಂದು ಮೇಯರ್ ರವರ ಪ್ರಕಟಣೆ ತಿಳಿಸಿದೆ
ಪಾಲಿಕೆಗೆ ಪ್ರತಿದಿನ ನೂರಾರು ಮಂದಿ ಸಾರ್ವಜನಿಕರು ಬಂದು ಹೋಗುತ್ತಿದ್ದಾರೆ. ಸದ್ಯದ ಪರಿಸ್ಥಿತಿಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಏರುತ್ತಲೇ ಇರುವುದರಿಂದ ಸೋಮವಾರದಿಂದ ಜೂನ್ 29 ರಿಂದ ಒಂದು ವಾರಗಳ ಕಾಲ ಪ್ರವೇಶ ನಿರ್ಬಂಧಿಸಲಾಗಿದೆ ಎಂದು ಮಂಗಳೂರು ಮಹಾನಗರ ಪಾಲಿಕೆ ಮೇಯರ್ ದಿವಾಕರ್ ಪಾಂಡೇಶ್ವರ ತಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.