- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಮಂಗಳೂರು : ಕಲ್ಲಿನ ಕ್ವಾರಿಗೆ ದೂಡಿ ಪತ್ನಿಯನ್ನು ಕೊಲೆ ಮಾಡಿದ ಟಿಪ್ಪರ್ ಚಾಲಕ

quary [1]ಮಂಗಳೂರು :  ತನ್ನ ಪತ್ನಿಯನ್ನು ಬಜ್ಪೆ ಸಮೀಪದ ಕರಂಬಾರು ಅಂತೋಣಿಕಟ್ಟೆಯ ಕಲ್ಲಿನ ಕ್ವಾರಿಗೆ ದೂಡಿ ಕೊಲೆ ಮಾಡಿ ಪರಾರಿಯಾದ ಘಟನೆ ನಡೆದಿದೆ.

ಕಾವೂರಿನ ಟಿಪ್ಪರ್ ಚಾಲಕ ಗಣೇಶ್(40) ತನ್ನ ಪತ್ನಿ ಶಾಂತಾ(30) ಅವರನ್ನು ಕೊಲೆ ಮಾಡಿದ ಆರೋಪಿ ಎನ್ನಲಾಗಿದೆ.

ಕಾವೂರು ಪೊಲೀಸರು ಗುರುವಾರ ರಾತ್ರಿ ಕರಂಬಾರಿಗೆ ತೆರಳಿ ಶಾಂತಾ ಅವರ ಶವವನ್ನು ಪತ್ತೆ ಮಾಡಿದ್ದಾರೆ.

ಗಣೇಶ್ ಹಾಸನ ಮೂಲದವನಾಗಿದ್ದು, ಕಾವೂರು ಪರಿಸರದಲ್ಲಿ ಟಿಪ್ಪರ್ ಚಾಲಕನಾಗಿ ಕೆಲಸ ಮಾಡುತ್ತಿದ್ದನು. ಪತ್ನಿ ಶಾಂತಾ ಕಾಸರಗೋಡು ಮೂಲದವರು. ದಂಪತಿಗೆ ಪುತ್ರ ಮತ್ತು ಪುತ್ರಿ ಇದ್ದಾರೆ. ಈ ಹಿಂದೆ ಕಾವೂರು ಸಮೀಪದ ಮರಕಡದಲ್ಲಿ ಹಾಗೂ ಇತ್ತೀಚೆಗೆ ಕಾವೂರಿನಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು.

ಪತಿ-ಪತ್ನಿ ಮಧ್ಯೆ ವಿರಸ ಉಂಟಾದ ಕಾರಣ ಪತ್ನಿ ಮಕ್ಕಳನ್ನು ಕರೆದುಕೊಂಡು ತವರಿಗೆ ಹೋಗಿದ್ದು, ಕೆಲವು ಸಮಯ ಪ್ರತ್ಯೇಕವಾಗಿ ವಾಸವಾಗಿದ್ದರು. ಇತ್ತೀಚೆಗೆ ಆತ ಆಕೆಯ ಮನೆಗೆ ತೆರಳಿ ಮಾತುಕತೆ ನಡೆಸಿ ಕಾವೂರಿಗೆ ಕರೆಸಿಕೊಂಡಿದ್ದನು.

ಬುಧವಾರ ಸಂಜೆ ಗಣೇಶ್ ಪತ್ನಿ ಶಾಂತಾಳನ್ನು ಕರೆದುಕೊಂಡು ಹೊರಗೆ ಹೋಗಿದ್ದು, ವಾಪಸ್ ಬಂದಿರಲಿಲ್ಲ. ಮನೆಯಲ್ಲಿ ಮಕ್ಕಳು ಮತ್ತು ಅಜ್ಜಿ(ಶಾಂತಾ ಅವರ ತಾಯಿ) ಇದ್ದರು. ಗುರುವಾರ ಸಂಜೆ ಗಣೇಶ್ ತನ್ನ ಮನೆಗೆ ಫೋನ್  ಮಾಡಿ ಪತ್ನಿಯನ್ನು ತಾನು ಕೊಲೆ ಮಾಡಿರುವುದಾಗಿ ಅತ್ತೆಗೆ ತಿಳಿಸಿದ್ದಾನೆ. ಅತ್ತೆ ಬಳಿಕ ಕಾವೂರು ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ.

ಆರೋಪಿ ಗಣೇಶ್ ಪತ್ನಿಯನ್ನು ಟಿಪ್ಪರ್‌ನಲ್ಲಿ ಕಲ್ಲು ಸಾಗಾಟ ಕೆಲಸ ಮಾಡುತ್ತಿದ್ದ ಕರಂಬಾರಿನ ಕಲ್ಲಿನ ಕ್ವಾರಿಗೆ ದೂಡಿ ಹಾಕಿದ್ದ ಎಂದು ಹೇಳಲಾಗಿದೆ. ಕಾವೂರು ಪೊಲೀಸರು ಗುರುವಾರ ರಾತ್ರಿ ಕರಂಬಾರಿಗೆ ತೆರಳಿ ಶಾಂತಾ ಅವರ ಶವವನ್ನು ಪತ್ತೆ ಮಾಡಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಘಟನೆಗೆ ನೈಜ ಕಾರಣ ತಿಳಿದು ಬಂದಿಲ್ಲ. ಆದರೆ ಪತ್ನಿಯ ಮೇಲಿನ ಅಸಮಾಧಾನ ಕಾರತಾನು ಣ ಎನ್ನಲಾಗಿದೆ. ಆರೋಪಿ ಗಣೇಶ್ ವಿರುದ್ಧ ಕೊಲೆ ಪ್ರಕರಣ ದಾಖಲಿಸಲಾಗಿದೆ.