ಲೋಕಸಭಾ ಅಭ್ಯರ್ಥಿ ಆಯ್ಕೆ, ಕಾಂಗ್ರೆಸ್ ನ ಜನಾರ್ದನ ಪೂಜಾರಿ ಮತ್ತು ವಿನಯ್ ಕುಮಾರ್ ಸೊರಕೆ ನಡುವೆ ಪೈಪೋಟಿ

3:10 PM, Friday, November 30th, 2012
Share
1 Star2 Stars3 Stars4 Stars5 Stars
(5 rating, 1 votes)
Loading...

Congress LS ticketಮಂಗಳೂರು :ಕಾಂಗ್ರೆಸ್ ಲೋಕಸಭಾ ಅಭ್ಯರ್ಥಿ ಆಯ್ಕೆಗೆ ಸಂಬಂಧಿಸಿದಂತೆ ಗುರುವಾರ ಬೆಳಗ್ಗೆ ಕಾಂಗ್ರೆಸ್ ಕಚೇರಿಯಲ್ಲಿ ಜನಾರ್ದನ ಪೂಜಾರಿ ಮತ್ತು ವಿನಯ್ ಕುಮಾರ್ ಸೊರಕೆ ಈ ಇಬ್ಬರು ನಾಯಕರ ಬೆಂಬಲಿಗರ ಬಿರುಸಿನ ಚಟುವಟಿಕೆ ಕಂಡುಬಂದಿತು.

ಈ ಬಿರುಸಿನ ಚಟುವಟಿಕೆಯಲ್ಲಿ ಎಐಸಿಸಿ ವೀಕ್ಷಕರಾಗಿ ಆಗಮಿಸಿದ್ದ ಕೇರಳದ ಮಾಜಿ ಶಾಸಕ ಮುರಳೀಧರನ್ ಜಿಲ್ಲಾ ಕಾಂಗ್ರೆಸ್ ನಾಯಕರುಗಳಿಂದ ಅಭಿಪ್ರಾಯಗಳನ್ನು ಸಂಗ್ರಹಿಸಲಾಯಿತು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಬಿ.ರಮಾನಾಥ ರೈ, ಶಾಸಕರಾದ ಯು.ಟಿ. ಖಾದರ್, ವಸಂತ ಬಂಗೇರ, ಕೆಪಿಸಿಸಿ ಕಾರ್ಯದರ್ಶಿ ಐವನ್ ಡಿಸೋಜ, ಅಶ್ವಿನಿಕುಮಾರ್ ರೈ, ಮಾಜಿ ಶಾಸಕರು, ಜಿಲ್ಲಾ ಕಾಂಗ್ರೆಸ್ ನ ವಿವಿಧ ಘಟಕಗಳ ಅಧ್ಯಕ್ಷರು ವೀಕ್ಷಕರನ್ನು ಭೇಟಿಯಾಗಿ ಅಭಿಪ್ರಾಯ ಮಂಡಿಸಿದರು.

ಬ್ಲಾಕ್ ಅಧ್ಯಕ್ಷರು ಹಾಗೂ ನಾಯಕರು ಜನಾರ್ದನ ಪೂಜಾರಿಯವರ ಕಡೆಗೆ ಹೆಚ್ಚಿನ ಒಲವು ತೋರಿದ್ದು, ವಿವಿಧ ಬ್ಲಾಕ್ ಗಳಿಂದ ಆಗಮಿಸಿದ 300ಕ್ಕೂ ಅಧಿಕ ಕಾಂಗ್ರೆಸ್ ಕಾರ್ಯಕರ್ತರು ನಿಗದಿತ ನಮೂನೆಯ ಫಾರಂನಲ್ಲಿ ತಮ್ಮ ಅಭಿಪ್ರಾಯ ಬರೆದು ವೀಕ್ಷಕರಿಗೆ ಹಸ್ತಾಂತರಿಸಿದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English