ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶುಕ್ರವಾರ ಆರು ಜನರನ್ನು ಬಲಿ ಪಡೆದ ಕೋವಿಡ್ ಮಹಾಮಾರಿ

10:51 PM, Friday, July 10th, 2020
Share
1 Star2 Stars3 Stars4 Stars5 Stars
(5 rating, 1 votes)
Loading...

covid-death ಮಂಗಳೂರು:   ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶುಕ್ರವಾರ ಒಂದೇ ದಿನ ಆರು ಮಂದಿ ಕೋವಿಡ್ ಸೋಂಕಿತರು ಸಾವನ್ನಪ್ಪಿದ್ದಾರೆ. ಇದರಿಂದ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 36ಕ್ಕೆ ಏರಿಕೆಯಾಗಿದೆ.

ಉಳ್ಳಾಲದ 67 ವರ್ಷದ ವೃದ್ಧ, ತೊಕ್ಕೊಟ್ಟುವಿನ 58 ವರ್ಷದ ಮಹಿಳೆ, ಫಳ್ನೀರ್ ಮೂಲದ 65 ವರ್ಷದ ವ್ಯಕ್ತಿ ಮತ್ತು ಹೊಸಬೆಟ್ಟುವಿನ 35 ವರ್ಷ ಪ್ರಾಯದ ಯುವಕ ಇಂದು ಕೋವಿಡ್-19 ಸೋಂಕಿನ ಕಾರಣದಿಂದ ಮರಣ ಹೊಂದಿದ್ದಾರೆ. ಉಳಿದ ಇಬ್ಬರು ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿರುವ ಬಗ್ಗೆ ವರದಿಯಾಗಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.

ಇಂದಿನ ಆರು ಕೋವಿಡ್ 19 ಪ್ರಕರಣಗಳ ಕಾರಣದಿಂದ ಜಿಲ್ಲೆಯಲ್ಲಿ ಸೋಂಕಿತರ ಸಾವಿನ ಸಂಖ್ಯೆ 36ಕ್ಕೆ ಏರಿಕೆಯಾಗಿದೆ. ಒಂದೇ ದಿನ ಆರು ಮಂದಿ ಸೋಂಕಿತರು ಸಾವನ್ನಪ್ಪಿದ್ದು ಜನತೆಯ ಆತಂಕ್ಕೆ ಕಾರಣವಾಗಿದೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English