ಎಸ್ಎಸ್ಎಲ್ ಸಿ ಪರೀಕ್ಷೆ ಹಿನ್ನಲೆ ಪೊಳಲಿ ರಾಜರಾಜೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್

11:15 PM, Friday, July 10th, 2020
Share
1 Star2 Stars3 Stars4 Stars5 Stars
(5 rating, 1 votes)
Loading...

education minister ಬಂಟ್ವಾಳ: ಕೋವಿಡ್-19 ಸೋಂಕು ಭೀತಿಯ ನಡುವೆಯೂ ರಾಜ್ಯದ ಎಸ್ಎಸ್ಎಲ್ ಸಿ ಪರೀಕ್ಷೆಯನ್ನು ಬಹುತೇಕ ಯಶಸ್ವಿಯಾಗಿ ಮುಗಿಸಿದ ಹಿನ್ನಲೆಯಲ್ಲಿ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಅವರು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪೊಳಲಿ ರಾಜರಾಜೇಶ್ವರಿ ದೇವಸ್ಥಾನಕ್ಕೆ ಇಂದು ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

ಈ ವೇಳೆ ಕಾಲಿನಲ್ಲಿ ಎಸ್ಎಸ್ಎಲ್ ಸಿ ಪರೀಕ್ಷೆ ಬರೆದಿದ್ದ ಕೌಶಿಕ್ ನನ್ನು ದೇವಸ್ಥಾನದ ಪ್ರವೇಶ ದ್ವಾರದ ಬಳಿ ಭೇಟಿ ಆತನ ಜತೆ ಉಭಯ ಕುಶಲೋಪರಿ ವಿಚಾರಿಸಿದರು.

ನೀನೇ ನಮಗೆ ಸ್ಪೂರ್ತಿ ಎಂದು ಆತನ ಪಠ್ಯೇತರ ಚಟುವಟಿಕೆಗಳ ಕುರಿತು ಮೆಚ್ಚುಗೆ ವ್ಯಕ್ತಪಡಿಸಿ ಯಾವ ಪರೀಕ್ಷೆ ಹೇಗಿತ್ತು ಎಂಬ ಮಾಹಿತಿ ಕೇಳಿದರು. ನಿನ್ನ ಸಾಧನೆಯ ಕುರಿತು ಅದೇ ದಿನ ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿದ್ದೆ ಎಂದರು. ತಮ್ಮ ಆಪ್ತ ಸಹಾಯಕನನ್ನು ಕರೆದು ಪೋಟೊ ತೆಗೆಸಿಕೊಂಡರು.

ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು, ತಾಲೂಕು ಪಂಚಾಯತ್‌ ಅಧ್ಯಕ್ಷ ಚಂದ್ರಹಾಸ ಕರ್ಕೇರ, ಶಿಕ್ಷಣಾಧಿಕಾರಿ ಜ್ಞಾನೇಶ್ ಮತ್ತು ಇತರರು ಈ ವೇಳೆ ಉಪಸ್ಥಿತರಿದ್ದರು.

ಚಿತ್ರ : ಕಿಶೋರ್ ಪೆರಾಜೆ 

education minister

education minister

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English