[1]ಮಂಗಳೂರು : ಕೋವಿಡ್ ಸೋಂಕು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಚ್ಚಾಗಿದ್ದು ಭಾನುವಾರ ಒಂದೇ ದಿನ 5 ಜನರನ್ನು ಬಲಿ ಪಡೆದುಕೊಂಡಿರುವ ವರದಿ ಬಂದಿದೆ.
ಮೃತರಲ್ಲಿ ಬೆಳ್ತಂಗಡಿಯ ಪಿಲಿಚಾಮುಂಡಿಕಲ್ಲು ನಿವಾಸಿ 60 ವರ್ಷದ ವೃದ್ಧ, ಪುತ್ತೂರಿನ ಮೂಲಡ್ಕ ನಿವಾಸಿ 50 ವರ್ಷದ ವ್ಯಕ್ತಿ , ಮಂಗಳೂರಿನ ಉರ್ವಾಸ್ಟೋರ್ ನಿವಾಸಿ 72 ವರ್ಷದ ವೃದ್ಧ, ಮಂಗಳೂರಿನ ಬಳ್ಳಾಲ್ ಭಾಗ್ ನಿವಾಸಿ 60 ವರ್ಷದ ವೃದ್ಧೆ, ಹಾಗೂ ಮಂಗಳೂರಿನ ಬಂದರು ನಿವಾಸಿ 68 ವರ್ಷದ ವೃದ್ಧೆ ಸೋಂಕಿಗೆ ಬಲಿಯಾಗಿದ್ದಾರೆ.
ಇಂದು ಸಾವನ್ನಪ್ಪಿದ ಐದು ಮಂದಿಯಲ್ಲಿ ನಾಲ್ವರು ಮಂಗಳೂರು ಸರ್ಕಾರಿ ಕೋವಿಡ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದರೆ ಪುತ್ತೂರು ಮೂಲದ ಓರ್ವ ಪುತ್ತೂರು ಮೂಲದ ಸೋಂಕಿತ ದೇರಳಕಟ್ಟೆ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಒಟ್ಟು ಸಾವಿನ ಸಂಖ್ಯೆ 46ಕ್ಕೆ ಏರಿಕೆಯಾಗಿದೆ.