- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ರಾಜ್ಯ ಪದವಿ ಪೂರ್ವ ಶಿಕ್ಷಣ ಇಲಾಖೆ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ

PU Karnataka [1]ಬೆಂಗಳೂರು: ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಬೆಂಗಳೂರಿನಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ರಾಜ್ಯ ಪದವಿ ಪೂರ್ವ ಶಿಕ್ಷಣ ಇಲಾಖೆ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ಮಂಗಳವಾರ ಪ್ರಕಟಿಸಿದರು

ಈ ವರ್ಷ ಒಟ್ಟಾರೆ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳ ಪ್ರಮಾಣ ಶೇಕಡಾ 61.80 ಆಗಿದೆ. ಕಳೆದ ವರ್ಷಕ್ಕಿಂತ ಶೇಕಡಾ 0.7ರಷ್ಟು ಫಲಿತಾಂಶ ಹೆಚ್ಚಾಗಿದ್ದು ಕಳೆದ ವರ್ಷ ಶೇಕಡಾ 61.73 ಫಲಿತಾಂಶ ಬಂದಿತ್ತು.

ಶೇಕಡಾ 68.73ರಷ್ಟು ಫಲಿತಾಂಶ ಗಳಿಸಿ ಹುಡುಗಿಯರೇ ಮೇಲಗೈ ಸಾಧಿಸಿದ್ದಾರೆ. ರಾಜ್ಯದಲ್ಲಿ ತೇರ್ಗಡೆ ಹೊಂದಿದ ಒಟ್ಟಾರೆ ಹುಡುಗರ ಸಂಖ್ಯೆ ಶೇಕಡಾ 54.77. ವಿದ್ಯಾರ್ಥಿಗಳ ಮೊಬೈಲ್ ಸಂಖ್ಯೆಗೆ ಎಸ್ ಎಂ ಎಸ್ ಮೂಲಕ ಫಲಿತಾಂಶ ಕಳುಹಿಸಲಾಗಿದೆ. ಅಲ್ಲದೆ ಇಲಾಖೆಯ ವೆಬ್ ಸೈಟ್ karresults.nic.in [2]ನಲ್ಲಿ ಪ್ರಕಟಿಸಲಾಗಿದೆ.

ಶೇಕಡಾ 90.71 ಫಲಿತಾಂಶ ಪಡೆಯುವುದರೊಂದಿಗೆ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳು ಮೊದಲ ಸ್ಥಾನದಲ್ಲಿ, ಶೇಕಡಾ 81.53 ಫಲಿತಾಂಶದೊಂದಿಗೆ ಕೊಡಗು ಜಿಲ್ಲೆ ದ್ವಿತೀಯ ಸ್ಥಾನದಲ್ಲಿ 56.08 ಶೇಕಡಾದೊಂದಿಗೆ ಚಿತ್ರದುರ್ಗ, ರಾಯಚೂರು ಶೇಕಡಾ 56.23 ಶೇಕಡಾದೊಂದಿಗೆ ಮತ್ತು ವಿಜಯಪುರ 54.22 ಶೇಕಡಾದೊಂದಿಗೆ ಕೊನೆಯ ಮೂರು ಸ್ಥಾನಗಳಲ್ಲಿವೆ.