- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಎಂಟು ಜನ ಗಾಂಜಾ ವ್ಯಸನಿಗಳ ತಂಡದಿಂದ ಯುವಕರ ಮೇಲೆ ತಲವಾರು ಹಲ್ಲೆ

Bajilakeri Gangwar [1]ಮಂಗಳೂರು : ನಗರದ ಬಜಿಲಕೇರಿಯಲ್ಲಿ ಜುಲೈ 13 ರ ಸೋಮವಾರ ತಡರಾತ್ರಿ  ಸುಮಾರು ಎಂಟು ಜನರ ತಂಡವೊಂದು ಯುವಕನ ಮೇಲೆ ದಾಳಿ ಮಾಡಿದೆ, ಮಾರಕ ಆಯುಧ ಹೊಂದಿದ್ದ ಗ್ಯಾಂಗ್ ಮೂವರು ಯುವಕರ ಮೇಲೆ ಹಲ್ಲೆ ನಡೆಸಿದೆ. ಕ್ಷುಲ್ಲಕ ಕಾರಣಗಳಿಂದ ಈ ದಾಳಿ ನಡೆದಿದೆ ಎಂದು ವರದಿಯಾಗಿದೆ.

ಗಾಯಗೊಂಡ ಮೂವರು ಇಲ್ಲಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಪೊಲೀಸರು ಅಪರಾಧ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು ಗ್ಯಾಂಗ್ ಕೃತ್ಯ ನಡೆಸಿದ್ದ ಸ್ಥಳದಲ್ಲಿನ ಮನೆ ಮುಂದಿನ ವಸ್ತುಗಳನ್ನು ಹಾನಿಗೊಳಿಸಿದೆ.

ಯುವಕರು ಗಾಂಜಾ ವ್ಯಸನಿಗಳಿಗೆ  ಈ ಬಗ್ಗೆ ಕೆಲ ದಿನಗಳ ಹಿಂದೆ ಎಚ್ಚರಿಸಿದ್ದಕ್ಕೆ ಈ ರೀತಿ ಪ್ರತಿಕಾರ ತೀರಿಸಿದೆ ಎನ್ನಲಾಗಿದೆ.

ಸಧ್ಯ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿನಿಖೆಗೆ ಮಾರ್ಗದರ್ಶನ ನೀಡುತ್ತಿದ್ದಾರೆ. ಪ್ರದೇಶದಲ್ಲಿ ಶಾಂತಿ ಕಾಪಾಡಲು ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದೆ. ಈ ನಡುವೆ ಹಳೆ ದ್ವೇಷದ ಹಿನ್ನೆಲೆ ಗಾಂಜಾ ಸೇವಿಸಿದ್ದ ಯುವಕರು ಈ ಕೃತ್ಯ ಎಸಗಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.