ಕೊರೋನಾ ಸೋಂಕಿತರು : ದಕ್ಷಿಣ ಕನ್ನಡ ಜಿಲ್ಲೆ 73, ಉಡುಪಿ ಜಿಲ್ಲೆ 53, ಕಾಸರಗೋಡು ಜಿಲ್ಲೆ 74

1:38 AM, Thursday, July 16th, 2020
Share
1 Star2 Stars3 Stars4 Stars5 Stars
(4 rating, 1 votes)
Loading...

corona virus ಮಂಗಳೂರು : ದಕ್ಷಿಣ ಕನ್ನಡ  ಜಿಲ್ಲೆಯಲ್ಲಿ ಬುಧವಾರ 73 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ.  ಜಿಲ್ಲೆಯಲ್ಲಿ 104 ಮಂದಿಯ ಬುಧವಾರದಂದು ಸೋಂಕು ಮುಕ್ತರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 2525 ಕ್ಕೆ ಏರಿಕೆಯಾಗಿದೆ. ಆ ಮೂಲಕ ಜಿಲ್ಲೆಯಲ್ಲಿ ಇಲ್ಲಿಯ ತನಕ 1089 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. 1379 ಮಂದಿ ಸದ್ಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಜಿಲ್ಲೆಯಲ್ಲಿ ಇಲ್ಲಿಯ ತನಕ 22740 ಮಂದಿಯ ವರದಿ ನೆಗೆಟಿವ್ ಬಂದಿದೆ.

ದಕ್ಷಿಣ ಕನ್ನಡದಲ್ಲಿ  ಬುಧವಾರದಂದು ನಾಲ್ವರು ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ. ಸುಳ್ಯ ತಾಲೂಕಿನ 60 ವರ್ಷದ ಮಹಿಳೆ ಸೋಂಕಿನಿಂದ ಮೃತಪಟ್ಟಿದ್ದಾರೆ. ಮೃತರು ಡಯಾಬಿಟಿಸ್ ನಿಂದ ಬಳಲುತ್ತಿದ್ದರು. ಹಾಗೂ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಎಂದು ತಿಳಿದುಬಂದಿದೆ. ಇನ್ನು ಬಂಟ್ವಾಳ ತಾಲೂಕಿನ 73 ವರ್ಷದ ವ್ಯಕ್ತಿ ಕೊರೊನಾದಿಂದ ಮೃತಪಟ್ಟಿದ್ದಾರೆ. ನ್ಯುಮೋನಿಯಾದಿಂದಾಗಿ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇನ್ನು ಬಂಟ್ವಾಳ ಮೂಲದ 70 ವರ್ಷದ ವ್ಯಕ್ತಿ ಸೋಂಕಿನಿಂದ ಮೃತಪಟ್ಟಿದ್ದು, ಇವರು ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದರು. ಇನ್ನು ಬಂಟ್ವಾಳ ಮೂಲದ 68 ವರ್ಷದ ಮಹಿಳೆ ಮೃತಪಟ್ಟಿದ್ದು, ಅವರು ಡಯಾಬಿಟಿಸ್ ನಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದೆ.

ಉಡುಪಿ ಜಿಲ್ಲೆಯಲ್ಲಿ ಬುಧವಾರ ಮತ್ತೆ 53 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಆ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 1786ಕ್ಕೆ ಏರಿಕೆಯಾಗಿದೆ. ಈ ಪೈಕಿ 401 ಮಂದಿ ಮಾತ್ರ ಸದ್ಯ ಆಸ್ಪತ್ರೆಗಳಲ್ಲಿ ಚಿಕಿತ್ಸೆಯಲ್ಲಿದ್ದಾರೆ. ಬುಧವಾರದಂದು 22 ಮಂದಿ ಗುಣಮುಖರಾಗಿದ್ದು, 1382 ಮಂದಿ ಜಿಲ್ಲೆಯಲ್ಲಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.

ಕಾಸರಗೋಡು ಜಿಲ್ಲೆಯಲ್ಲಿ ಬುಧವಾರ 74 ಮಂದಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಇದರಲ್ಲಿ  ಮಂಜೇಶ್ವರ 16, ಮಧೂರು 9, ಕಾಸರಗೋಡು , ಮಂಗಲ್ಪಾಡಿ , ಕುಂಬಳೆ ತಲಾ 3, ಮೊಗ್ರಾಲ್ ಪುತ್ತೂರು , ಅಜನೂರು , ಕುಂಬಳೆ ತಲಾ 3, ಚೆಮ್ನಾಡ್ , ಉದುಮ , ಮೀ0 ಜ , ಚೆರ್ವತ್ತೂರು , ಕಾರಡ್ಕ , ತ್ರಿಕ್ಕರಿಪುರ , ವರ್ಕಾಡಿ ತಲಾ ಒಬ್ಬರಿಗೆ ಸೋಂಕು ದೃಢಪಟ್ಟಿದೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English