- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಬರಿಗಾಲಲ್ಲಿ ಬೆಟ್ಟ ಹತ್ತಿ ಕೊರೊನಾ ತೊಲಗಿಸಲು ಚಾಮುಂಡಿಯ ಪ್ರಾರ್ಥಿಸಿದ ಶೋಭಾ ಕರಂದ್ಲಾಜೆ

shobha karandlaje [1]ಮೈಸೂರು: ಮಹಾಮಾರಿ ಕೊರೊನಾ ತೊಲಗಿಸಲು ಶೋಭಾ ಕರಂದ್ಲಾಜೆ ಬರಿಗಾಲಲ್ಲಿ ಚಾಮುಂಡಿ ಬೆಟ್ಟ ಹತ್ತಿದ್ದಾರೆ. ಆಷಾಢ ಮಾಸದ ಕೊನೆಯ ಶುಕ್ರವಾರವಾದ ಇಂದು ಮೈಸೂರಿನ ಚಾಮುಂಡಿ ಬೆಟ್ಟ ಹತ್ತಿ, ನಾಡದೇವತೆ ದರ್ಶನ ಪಡೆದಿದ್ದಾರೆ.

ಇಡೀ ವಿಶ್ವ ವ್ಯಾಪಿ ಕೊರೊನಾ ತಾಂಡವವಾಡುತ್ತಿದ್ದು, ಅತೀ ಶೀಘ್ರವೇ ಮಹಾಮಾರಿ ತೊಲಗಲಿ, ನಾಡಿನ ಜನತೆಗೆ ಆರೋಗ್ಯ, ಸುಖ ಶಾಂತಿ ಲಭಿಸಲಿ ಎಂದು ಪ್ರಾರ್ಥನೆ ಸಲ್ಲಿಸಿರುವುದಾಗಿ ತಿಳಿಸಿದ್ದಾರೆ.

ಆಷಾಢ ಮಾಸದಲ್ಲಿ ಪ್ರತಿ ವರ್ಷ ಅವರು ಬೆಟ್ಟವನ್ನು ಬರಿಗಾಲಿನಲ್ಲಿ ಹತ್ತುವ ವಾಡಿಕೆ ಇದ್ದು, ಈ ವರ್ಷವು ಅದನ್ನು ಪೂರ್ಣಗೊಳಿಸಿದ್ದಾರೆ‌.

ಶೋಭಾ ಕರಂದ್ಲಾಜೆ ಅವರು ಪ್ರತಿ ಆಷಾಢ ಮಾಸದಲ್ಲೂ ಮೈಸೂರಿಗೆ ಬಂದು ಬರಿಗಾಲಲ್ಲಿ ಚಾಮುಂಡಿ ಬೆಟ್ಟ ಹತ್ತುತ್ತಾರೆ. ಬಳಿಕ ತಾಯಿ ಚಾಮುಂಡಿಯ ದರ್ಶನ ಪಡೆದುಕೊಳ್ಳುತ್ತಾರೆ. ಅದರಂತೆಯೇ ಇಂದು ನಾಲ್ಕನೇ ಆಷಾಢ ಶುಕ್ರವಾರವಾದ ಹಿನ್ನೆಲೆಯಲ್ಲಿ ಈ ಬಾರಿಯೂ ಶೋಭಾ ಕರಂದ್ಲಾಜೆ ಮುಂಜಾನೆಯೇ ಬರಿಗಾಲಲ್ಲಿ ಚಾಮುಂಡಿ ಬೆಟ್ಟ ಹತ್ತಿ, ತಾಯಿಯ ದರ್ಶನ ಪಡೆದುಕೊಂಡು ಪ್ರಾರ್ಥಿಸಿದ್ದಾರೆ.