ತಾಯಿಯನ್ನು ನೋಡಿಕೊಳ್ಳಲು ಸಾಧ್ಯವಾಗದೆ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ

7:09 PM, Friday, July 17th, 2020
Share
1 Star2 Stars3 Stars4 Stars5 Stars
(5 rating, 1 votes)
Loading...

Ravitejaಶಿರಸಿ  : ತಾಯಿ ಮತ್ತು ಮಗ ಇಬ್ಬರೇ ಇದ್ದು ಮನೆಯಲ್ಲಿನ ಕಷ್ಟ ನೋಡಲಾಗದೇ ಕಾಲೇಜು ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಹೃದಯ ವಿದ್ರಾವಕ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ‌ನೀರ್ನಳ್ಳಿಯಲ್ಲಿ‌ ನಡೆದಿದೆ.

ನಿರ್ನಳ್ಳಿಯ ರವಿತೇಜ ಗಣಪತಿ ಭಟ್ (21) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಮನೆಯಲ್ಲಿ ತಾಯಿ ಮತ್ತು ಮಗ ಇಬ್ಬರೇ ಇದ್ದು ಮನೆಯ ನಿರ್ವಹಣೆ ಕಷ್ಟ ಎಂದು ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ಪೊಲೀಸರು ತಿಳಿಸಿದ್ದಾರೆ.

ಮೊದಲು ತಿಮಿಟ್ ಸೇವಿಸಿ ನಂತರ ‌ನೇಣು‌ ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸ್ಥಳಕ್ಕೆ ಸಿಪಿ‌ಐ ಪ್ರದೀಪ್ ಹಾಗೂ ಪಿಎಸ್ಐ ನಂಜಾ ನಾಯ್ಕ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಘಟನೆ ಕುರಿತು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕಾರ್ಯ ಕೈಗೊಂಡಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English