ವಿದ್ಯುತ್ ಪ್ರವಹಿಸಿ ಎಸೆಸೆಲ್ಸಿ ವಿದ್ಯಾರ್ಥಿ ಮೃತ್ಯು

2:28 PM, Saturday, July 18th, 2020
Share
1 Star2 Stars3 Stars4 Stars5 Stars
(5 rating, 1 votes)
Loading...

Gouthamಉಡುಪಿ : ಎಸೆಸೆಲ್ಸಿ ವಿದ್ಯಾರ್ಥಿಯೊಬ್ಬ ವಿದ್ಯುತ್ ಪ್ರವಹಿಸಿ ಮೃತಪಟ್ಟ ಘಟನೆ ಜು.17ರಂದು ರಾತ್ರಿ ವೇಳೆ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಲಕ್ಷ್ಮೀನಗರ ಆರನೆ ಕ್ರಾಸ್‌ ನಲ್ಲಿ ನಡೆದಿದೆ.

ಮೃತರನ್ನು ಲಕ್ಷ್ಮೀನಗರದ ಮಂಜುನಾಥ್ ನಾಯಕ್ ಎಂಬವರ ಮಗ ಗೌತಮ್(15) ಎಂದು ಗುರುತಿಸಲಾಗಿದೆ.

ನೆರೆಮನೆಯವರು ತಮ್ಮ ಬಾವಿಯಿಂದ ಪಂಪ್‌ಸೆಟ್ ಮೇಲಕ್ಕೆತ್ತುವಾಗ ಅಲ್ಲೇ ಸಮೀಪದಲ್ಲಿ ಇದ್ದ ಗೌತಮ್ ವಿದ್ಯುತ್ ಆಘಾತಕ್ಕೆ ಒಳಗಾಗಿ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಲ್ಯಾಣಪುರ ಮಿಲಾಗ್ರಿಸ್ ಪ್ರೌಢಶಾಲೆಯ ಪ್ರತಿಭಾವಂತ ಎಸೆಸೆಲ್ಸಿ ವಿದ್ಯಾರ್ಥಿಯಾಗಿರುವ ಗೌತಮ್, ಇತ್ತೀಚೆಗೆ ನಡೆದ ಎಸೆಸೆಲ್ಸಿ ಪರೀಕ್ಷೆ ಬರೆದಿದ್ದನು. ಈತ ಮಂಜುನಾಥ್ ನಾಯಕ್‌ರ ಒಬ್ಬನೇ ಮಗ. ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English