ಬೆಳ್ತಂಗಡಿ ಸಮೀಪದ ಪಣೆತ್ತಡಿ ಜಮೀನಿನಲ್ಲಿ ಪುರಾತನ ನಿಧಿ, ಸ್ಥಳಕ್ಕೆ ತಹಶೀಲ್ದಾರ್ ಎಸ್.ಐ, ಗ್ರಾಮಾಧಿಕಾರಿ ದೌಡು

7:55 PM, Wednesday, July 22nd, 2020
Share
1 Star2 Stars3 Stars4 Stars5 Stars
(No Ratings Yet)
Loading...

nidhi ಬೆಳ್ತಂಗಡಿ : ವ್ಯಕ್ತಿಯೊಬ್ಬರ ಜಮೀನಿನಲ್ಲಿ ನಿಧಿ ಪತ್ತೆಯಾಗಿದೆಯೆಂದು ತಹಶೀಲ್ದಾರ್, ಬೆಳ್ತಂಗಡಿ ಎಸ್.ಐ, ಗ್ರಾಮ  ಲೆಕ್ಕಿಗ ಅಧಿಕಾರಿಗಳು ತಾಲೂಕಿನ ನಡ ಗ್ರಾ.ಪಂ. ವ್ಯಾಪ್ತಿಯ ಬರಾಯ ಕನ್ಯಾಡಿ ಗ್ರಾಮದ ಪಣೆತ್ತಡಿಯಲ್ಲಿನಿಧಿ ಶೋಧಕ್ಕೆ‌ ಕಾರ್ಯಕ್ಕೆ ಮುಂದಾಗಿದ್ದಾರೆ.

ಒಂದು ತಿಂಗಳ ಹಿಂದೆ ಇಲ್ಲಿನ ಆನಂದ ಶೆಟ್ಟಿ ಅವರಿಗೆ ನಿಧಿ ಲಭಿಸಿತ್ತು ಇದೀಗ ಅವರು ನಿಧಿ ಸಿಕ್ಕಿದ ಜಾಗವನ್ನು ಸಮತಟ್ಟು ಮಾಡಿದ್ದಾರೆ ಎಂದು ಯಾರೋ ಸ್ಥಳೀಯರು ವಿಡಿಯೋ ಮಾಡಿ ಎಸಿ ಯವರಿಗೆ ಕಳುಹಿಸಿ ದ್ದರಂತೆ.

ತಹಶೀಲ್ದಾರ್ ಸಮ್ಮುಖದಲ್ಲಿ ಬುಧವಾರ ನಿಧಿ ಶೋಧಕ್ಕೆ‌ ಸಿದ್ಧತೆಗಳು ನಡೆಯುತ್ತಿದ್ದು ಬೆಳ್ತಂಗಡಿ ಎಸ್.ಐ. ನಂದಕುಮಾರ್, ನಡ ಗ್ರಾ.ಪಂ. ಗ್ರಾಮ ಲೆಕ್ಕಿಗ ಅಧಿಕಾರಿಗಳು ಸ್ಥಳದಲ್ಲಿ ಜಮಾಯಿಸಿದ್ದಾರೆ.

ಸ್ಥಳದಲ್ಲಿ ತಾಳೆಮರವಿದ್ದು ಅದನ್ನು ತೆರವುಗೊಳಿಸುವಾಗ ಮಣ್ಣು ಕುಸಿತಗೊಂಡಿದ್ದು ಯಾವುದೇ ನಿಧಿ ಇಲ್ಲ ಎಂದು ಜಮೀನಿನ ಯಜಮಾನ ಆನಂದ ಶೆಟ್ಟಿ ತಿಳಿಸಿದ್ದಾರೆ.

ನಿಧಿ ಇರುವ ಸುದ್ದಿ ತಿಳಿದು ಸ್ಥಳದಲ್ಲಿ ನಿಧಿ ನೋಡಲು ಜನಜಂಗುಳಿ ಜಮಾಯಿಸಿತ್ತು.  ಇದಕ್ಕೆ ಸಂಬಂಧಿಸಿದಂತೆ, ಇಲ್ಲಿ ನಿಧಿ ಇರುವ ಬಗ್ಗೆ ದೂರು ಬಂದ ಹಿನ್ನೆಲೆ ಕಾರ್ಯಾಚರಣೆ ನಡೆಸಿದ್ದೇವೆ, ಆದರೆ ನಿಧಿ ಲಭ್ಯವಾಗಿಲ್ಲ ಎಂದು ತಹಶೀಲ್ದಾರ್ ಸ್ಪಷ್ಟಣೆ ನೀಡಿದ್ದಾರೆ.

nidhi

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English