ನಾಗರಪಂಚಮಿಗೂ ಕೊರೋನಾ ಎಫೆಕ್ಟ್, ದೇವಸ್ಥಾನಕ್ಕೆ ಭಕ್ತರಿಗಿಲ್ಲ ಪ್ರವೇಶ..!

9:15 PM, Friday, July 24th, 2020
Share
1 Star2 Stars3 Stars4 Stars5 Stars
(5 rating, 1 votes)
Loading...

naragapanchami

ಮಂಗಳೂರು: ಕೊರೋನಾ  ಎಫೆಕ್ಟ್ ಈ ಬಾರಿಯ ಹಬ್ಬಗಳ ಆಚರಣೆಗೂ ತಟ್ಟಿದೆ, ಹಿಂದೂ ಹಬ್ಬಗಳಲ್ಲಿ ಮೊದಲಿಗೆ ಬರುವ ಹಬ್ಬ ನಾಗರ ಪಂಚಮಿ. ಅದಕ್ಕೂ ಕೊರೋನಾಮಹಾಮಾರಿ ತಡೆಯೊಡ್ಡಿದೆ. ಈ ಬಾರಿ ನಾಗರ ಪಂಚಮಿಯನ್ನು ಭಕ್ತರು ದೇವಸ್ಥಾನಗಳಿಗೆ ತೆರಳಿ ಆಚರಿಸುವಂತಿಲ್ಲ. ಮಂಗಳೂರು ಸಮೇತ ರಾಜ್ಯದ ಎಲ್ಲಾ ನಾಗ ದೇವಸ್ಥಾನಗಳಲ್ಲಿ ನಾಗರಪಂಚಮಿ ಜುಲೈ 25 ರ ಶನಿವಾರ  ಆಚರಿಸುವಂತಿಲ್ಲ. ಮಂಗಳೂರಿನ ಇತಿಹಾಸ ಪ್ರಸಿದ್ದ ಕುಡುಪು‌ ಶ್ರೀ ಅನಂತ ಪದ್ಮನಾಭ ದೇವಸ್ಥಾನದಲ್ಲಿ, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಗಳಲ್ಲಿ ಈ ಬಾರಿ ಅರ್ಚರು ಮಾತ್ರ ನಾಗನಿಗೆ ಹಾಲೆರೆಯುವ ಮತ್ತು ಇತರ ಸೇವೆಗಳನ್ನು ಮಾಡಲಿದ್ದಾರೆ.

ಮಂಗಳೂರಿನ ಕುಡುಪು‌ ಶ್ರೀ ಅನಂತ ಪದ್ಮನಾಭ ದೇವಸ್ಥಾನದಲ್ಲಿ  ಪ್ರತಿ ವರ್ಷ ನಾಗರಪಂಚಮಿಯಂದು ಮೂವತ್ತು ಸಾವಿರಕ್ಕೂ ಹೆಚ್ಚು ಭಕ್ತರು ಪೂಜೆ ಸಲ್ಲಿಸುತ್ತಾರೆ. ಆದರೆ ಈ ವರ್ಷ ನಾಗರ ಪಂಚಮಿಯ ದಿನ ಭಕ್ತಾದಿಗಳಿಗೆ ದೇವರ ದರ್ಶನಕ್ಕೆ ಅವಕಾಶವಿಲ್ಲ. ನಿರ್ಬಂದ ಹಿನ್ನೆಲೆಯಲ್ಲಿ ಕ್ಷೇತ್ರದ ಆವರಣಕ್ಕೆ ಭಕ್ತಾದಿಗಳು ಬರುವಂತಿಲ್ಲ. ನಾಗರ ಪಂಚಮಿಯ ದಿನದಂದು ಸೇವೆಗಳು, ಸೇವಾಪ್ರಸಾದ, ತೀರ್ಥ ಪ್ರಸಾದ ಮತ್ತು ಅನ್ನ ಸಂತರ್ಪಣೆಗಳು ಇರುವುದಿಲ್ಲ. ನಾಗರ ಪಂಚಮಿಯ ಪ್ರಯುಕ್ತ ನಾಗ ತಂಬಿಲ, ಪಂಚಾಮೃತ, ಆಶ್ಲೇಷ ಬಲಿ ಮೊದಲಾದ ಯಾವುದೇ ಸೇವೆಗಳು ಇಲ್ಲ ಎಂದು ಕುಡುಪು ಶ್ರೀ ಅನಂತ ಪದ್ಮನಾಭ ದೇವಳದ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English