ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ವರ್ಗಾವಣೆ

6:13 PM, Tuesday, July 28th, 2020
Share
1 Star2 Stars3 Stars4 Stars5 Stars
(No Ratings Yet)
Loading...

sindhu b roopesh ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿದ್ದ‌ ಸಿಂಧೂ ಬಿ. ರೂಪೇಶ್ ಅವರು  ಬೆಂಗಳೂರಿಗೆ ವರ್ಗಾವಣೆ  ಆಗಿದೆ. ದ. ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಡಾ.ರಾಜೇಂದ್ರ ಕೆ.ವಿ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶಿಸಿದೆ.

ಡಾ.ರಾಜೇಂದ್ರ ಕೆ.ವಿ ಅವರು ಬೆಳಗಾವಿ ಜಿಲ್ಲಾ ಪಂಚಾಯತ್ ಸಿಇಓ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಅವರನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯನ್ನಾಗಿ ಸರ್ಕಾರ ನಿಯೋಜಿಸಿದೆ.

ಸಿಂಧೂ ರೂಪೇಶ್ ಅವರನ್ನು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಇ -ಆಡಳಿತ ವಿಭಾಗದ ನಿರ್ದೆಶಕಿಯನ್ನಾಗಿ ನಿಯೋಜಿಸಿ ಸರ್ಕಾರ ಆದೇಶ ಹೊರಡಿಸಿದೆ.

ಡಾ. ರಾಜೇಂದ್ರ ಕೆ.ವಿ ಅವರು 2013 ಕರ್ನಾಟಕ ಕೆಡೆರ್ ನ ಐಎಸ್ ಅಧಿಕಾರಿಯಾಗಿದ್ದಾರೆ. ಶಿವಮೊಗ್ಗದ ತೀರ್ಥಹಳ್ಳಿ ಮೂಲದವರಾಗಿರುವ ಇವರು ವೈದ್ಯರಾಗಿದ್ದರು. ನಂತರ ನಾಗರಿಕ ಸೇವೆ ಆಸಕ್ತಿಯಿಂದ ಐಎಎಸ್ ಪರೀಕ್ಷೆ ಬರೆದ ಇವರು ದೇಶದಲ್ಲಿ 32 ನೇ ರ್ಯಾಂಕ್ ಮತ್ತು ರಾಜ್ಯದಲ್ಲಿ ಮೊದಲ ಸ್ಥಾನ ಪಡೆದಿದ್ದರು

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English