ಚಾರ್ಮಾಡಿ ಘಾಟಿಯಲ್ಲಿ ಗುಡ್ಡ ಕುಸಿತ, ವಾಹನ ಸಂಚಾರಕ್ಕೆ ಮತ್ತೆ ಅಡ್ಡಿ

11:51 AM, Friday, August 7th, 2020
Share
1 Star2 Stars3 Stars4 Stars5 Stars
(No Ratings Yet)
Loading...

charmadi ಬೆಳ್ತಂಗಡಿ : ಚಾರ್ಮಾಡಿ ಘಾಟಿಯಲ್ಲಿ ಗುರುವಾರ ರಾತ್ರಿ ಗುಡ್ಡ ಕುಸಿತಗೊಂಡು ಸಂಚಾರಕ್ಕೆ ತೊಡಕಾಗಿದೆ.  ಈಗಾಗಲೇ  ಚಾರ್ಮಾಡಿ ಘಾಟಿಯಲ್ಲಿ ರಾತ್ರಿ ಸಂಚಾರ ನಿಷೇಧಗೊಲಿಸಲಾಗಿದೆ.

ಅಲೆಖಾನ್ ಸಮೀಪ ಗುಡ್ಡ ಕುಸಿತಗೊಂಡ ಪರಿಣಾಮ ಮುಂಜಾನೆ ವೇಳೆ ವಾಹನ ಸಂಚಾರಕ್ಕೆ ಮತ್ತೆ ಅಡ್ಡಿಯಾಗಿದೆ. ಸದ್ಯ ಸ್ಥಳದಲ್ಲಿ ತೆರವು ಕಾರ್ಯಾಚರಣೆ ಸಾಗುತ್ತಿದ್ದು ಒಂದು ಜಿಸಿಬಿ ನಿಯೋಜಿಸಲಾಗಿದೆ.

ಇನ್ನು ಕೊಟ್ಟಿಗೆಹಾರ ಬಳಿಯೂ ಭಾರೀ ಮಳೆಯಿಂದ ಚಾರ್ಮಾಡಿ ಘಾಟ್‍ನ ಮಣ್ಣು ರಸ್ತೆ ಕುಸಿದಿದೆ. ರಸ್ತೆಯ ಮೇಲೆ ಬಂಡೆಗಳು, ಮರಗಳು ಉರುಳಿ ಬೀಳುತ್ತಿದ್ದು, ಸವಾರರು ಎಚ್ಚರಿಕೆಯಾಗಿ ಪ್ರಯಾಣಿಸಬೇಕಾಗಿದೆ

ಕಳೆದ ವರ್ಷವೂ ಆಗಸ್ಟ್‌ ತಿಂಗಳಿನಲ್ಲಿ ಹೆಚ್ಚಿನ ಮಳೆಯಿಂದಾಗಿ ಚಾರ್ಮಾಡಿ ಘಾಟ್ ನಲ್ಲಿ ಗುಡ್ಡ ಕುಸಿತ ಸಂಭವಿಸಿತ್ತು. ಇದೀಗ ಮತ್ತೆ ಗುಡ್ಡ ಕುಸಿತದ ಬಗ್ಗೆ ವರದಿಯಾಗುತ್ತಿದೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English