[1]ಹುಬ್ಬಳ್ಳಿ: ಬೀಗರನ್ನು ಬೀಳ್ಕೊಡಲು ರಸ್ತೆ ಬದಿಯಲ್ಲಿ ನಿಂತಿದ್ದ ವೇಳೆ ಗುಂಡಿನ ಸುರಿಮಳೆಯಿಂದ ಗಂಭೀರವಾಗಿ ಗಾಯಗೊಂಡಿದ್ದ ಹುಬ್ಬಳ್ಳಿಯ ರೌಡಿ ಷೀಟರ್ ಫ್ರೋಟ್ ಇರ್ಫಾನ್ (52) ಶುಕ್ರವಾರ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ.
ಮೂಲತಃ ಉತ್ತರಕನ್ನಡ ಜಿಲ್ಲೆಯ ಇರ್ಫಾನ್ ಹೊಟ್ಟೆಪಾಡಿಗಾಗಿ ಧಾರವಾಡಕ್ಕೆ ಬಂದು ಅಲ್ಲಿಯೇ ನೆಲೆಯೂರಿ ತನ್ನ ಅಪರಾಧ ಜಗತ್ತನ್ನು ವಿಸ್ತಾರ ಮಾಡಿಕೊಂಡು ಡಾನ್ ಆಗಿದ್ದ.
ಮಗನ ಮದುವೆ ಮುಗಿಸಿ ಅತಿಥಿಗಳನ್ನು ಕಳುಹಿಸಲು ರಸ್ತೆ ಬದಿಯಲ್ಲಿ ಬಂದು ನಿಂತಿದ್ದ ವೇಳೆ ಬೈಕ್ನಲ್ಲಿ ಬಂದ ಮೂವರು ಗುಂಡಿನ ಮಳೆಗರೆದಿದ್ದರು. ಇರ್ಫಾನ್ ತಮ್ಮ ಮಗನ ಮದುವೆ ನಂತರ ಕಲ್ಯಾಣ ಮಂಟಪದ ಹೊರಗೆ ಬೀಗರಿಗೆ ಬೀಳ್ಕೊಡುಗೆ ನೀಡುತ್ತಿದ್ದ. ಈ ವೇಳೆ ಗುಂಡಿನ ದಾಳಿ ನಡೆದಿತ್ತು.
[2]ಜನರು ಓಡಾಟ ನಡೆಸುತ್ತಿರುವಾಗಲೇ ಸಿನಿಮೀಯ ರೀತಿಯಲ್ಲಿ ಬೈಕ್ನಲ್ಲಿ ಬಂದು ಅನಾಯಾಸವಾಗಿ ಗುಂಡು ಹಾರಿಸಿ ನಾಪತ್ತೆಯಾಗಿದ್ದು. ಈ ದೃಶ್ಯ ಸಿಸಿಟಿಯಲ್ಲಿ ಸೆರೆಯಾಗಿದೆ.
ಧಾರವಾಡದ ಫ್ರೋಟ್ ಇರ್ಫಾನ್ ನಾಲ್ಕು ಕೊಲೆ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪ ಹೊತ್ತಿದ್ದ. ಈ ಹಿನ್ನೆಲೆಯಲ್ಲಿ ರೌಡಿ ಷೀಟರ್ ಪಟ್ಟಿಯಲ್ಲಿ ಈತನ ಹೆಸರು ಇದೆ. ಕೊಲೆ ಪ್ರಕರಣದ ಹಿನ್ನೆಲೆಯಲ್ಲಿ ಇವರನ್ನು ಪೊಲೀಸ್ ಆಯುಕ್ತ ಆರ್.ದಿಲೀಪ್ ಧಾರವಾಡದಿಂದ ಗಡಿಪಾರು ಮಾಡಿದ್ದರು.
ಈ ಗುಂಡಿನ ದಾಳಿಗೆ ಹಳೇ ವೈಷಮ್ಯವೇ ಕಾರಣ ಎನ್ನಲಾಗುತ್ತಿದೆ. ಮೂರು ಗುಂಡು ಇರ್ಫಾನ್ಗೆ ತಗುಲಿದ್ದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ಪೊಲೀಸರು ಸಿಸಿಟಿವಿ ದೃಶ್ಯಗಳನ್ನು ಕಲೆ ಹಾಕಿ, ಓಡಿ ಹೋಗಿರುವವರ ಮತ್ತೂ ಬಳಕೆಯಾಗಿರುವ ದ್ವಿಚಕ್ರ ವಾಹನಗಳ ಮಾಹಿತಿ ಕಲೆ ಹಾಕುತ್ತಿದ್ದಾರೆ.