- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಕುಕ್ಕೆ ಸುಬ್ರಹ್ಮಣ್ಯ ಕುಮಾರಸ್ವಾಮಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ ಪ್ರಥಮ

anush [1]ಸುಬ್ರಹ್ಮಣ್ಯ: ಕಡಬ ತಾಲೂಕು ಕುಕ್ಕೆ ಸುಬ್ರಹ್ಮಣ್ಯ ಕುಮಾರಸ್ವಾಮಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಅನುಷ್ ಎ.ಎಲ್. 2019-20ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ 625 ಅಂಕಗಳನ್ನು ಪಡೆದುಕೊಂಡಿದ್ದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದು ಕೊಂಡಿದ್ದಾರೆ.

ಕೈಬೆರಳು ರಹಸ್ಯ, ನಿಮ್ಮ ಯಾವ ಬೆರಳಿನಲ್ಲಿ ಅದೃಷ್ಟವಿದೆ ನೋಡಿ ! [2]

ಇವರು ಬಳ್ಪ ಗ್ರಾಮದ ಲೊಕೇಶ್ ಮತ್ತು ಉಷಾ ಎಣ್ಣೆಮಜಲು ದಂಪತಿಗಳ ಪುತ್ರ.

ಶಿಕ್ಷಣ ಇಲಾಖೆಯ ಅಧಿಕೃತ ವೆಬ್ ಸೈಟ್ ನಲ್ಲಿ ಫಲಿತಾಂಶ ಪ್ರಕಟವಾಗಿದೆ. ಈ ಬಾರಿ ಶೇ. 71.80 ಫಲಿತಾಂಶ ಬಂದಿದೆ.

ಕೋವಿಡ್-19 ಸೋಂಕು ಭೀತಿ ಇದ್ದರೂ ಈ ಬಾರಿ 8,11,050 ಮಂದಿ ಈ ಬಾರಿ ಪರೀಕ್ಷೆ ಬರೆದಿದ್ದರು.

ಈ ಬಾರಿಯ ಪರೀಕ್ಷೆಯಲ್ಲಿ 66.41 ಶೇ ಬಾಲಕರು ಉತ್ತೀರ್ಣರಾಗಿದ್ದರೆ, ಶೇ. 77.74 ಬಾಲಕಿಯರು ಉತ್ತೀರ್ಣರಾಗಿದ್ದಾರೆ. ಕಳೆದ ಬಾರಿಯಂತೆ ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.