ಸೇತುವೆಯಿಂದ ಜಿಗಿದು ಪ್ರೇಮಿಗಳಿಬ್ಬರು ಆತ್ಮಹತ್ಯೆ

10:48 PM, Friday, August 14th, 2020
Share
1 Star2 Stars3 Stars4 Stars5 Stars
(No Ratings Yet)
Loading...

Tunga Riverಶಿವಮೊಗ್ಗ: ಇಲ್ಲಿನ ಬೈಪಾಸ್ ರಸ್ತೆಯ ಸೇತುವೆಯಿಂದ ಪ್ರೇಮಿಗಳಿಬ್ಬರು ತುಂಗಾ ನದಿಗೆ ಜಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಹುರುಳಿ ಹಳ್ಳಿ ಗ್ರಾಮದ ಸಂತೋಷ್ (25) ಹಾಗೂ ಕಾಕನಹಸುಡಿ ಗ್ರಾಮದ ಅನುಷಾ (20) ಅವರೇ ಆತ್ಮಹತ್ಯೆಗೆ ಶರಣಾಗಿರುವವರೆಂದು ತಿಳಿದುಬಂದಿದೆ.

ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.  ನಗರದಲ್ಲಿರುವ ವಿಧಾತ್ರಿ ಭವನ ಹೊಟೇಲ್ ನಲ್ಲಿ ಸಂತೋಷ ಕೆಲಸಮಾಡುತ್ತಿದ್ದ. ಅನುಷಾ ಇತ್ತೀಚೆಗಷ್ಟೇ ಪಿ.ಯು. ಶಿಕ್ಷಣವನ್ನು ಮುಗಿಸಿದ್ದಳು. ಇವರಿಬ್ಬರು ಕೆಲವು ಸಮಯಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು.

ಇಂದು ಮಧ್ಯಾಹ್ನದ ಸಮಯದಲ್ಲಿ ಇವರಿಬ್ಬರು ಇದ್ದಕ್ಕಿದ್ದಂತೆಯೇ ತುಂಗಾ ನದಿಗೆ ಹಾರಿದ್ದಾರೆ, ಕೂಡಲೇ ಸ್ಥಳದಲ್ಲಿದ್ದವರು ನದಿಗೆ ಧುಮುಕಿ ಅನುಷಾಳನ್ನು ರಕ್ಷಿಸಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಂತಾಜನಕ ಸ್ಥಿತಿಯಲ್ಲಿದ್ದ ಆಕೆ ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾಳೆ ಎಂದು ತಿಳಿದುಬಂದಿದೆ.

ಸಂತೋಷ್ ಶವಕ್ಕಾಗಿ ತುಂಗಾ ನದಿಯಲ್ಲಿ ಹುಡುಕಾಟ ಮುಂದುವರೆದಿದೆ. ಘಟನೆಗೆ ಸಂಬಂಧಿಸಿದಂತೆ ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English