- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಸರ್ಕಾರದ ಜನ ಸ್ನೇಹಿ ಯೋಜನೆಗಳನ್ನು ಪ್ರತಿ ಮನೆಗೆ ತಲುಪುವಂತೆ ಮಾಡುವುದು ನಮ್ಮಉದ್ದೇಶ : ಕೋಟ ಶ್ರೀನಿವಾಸ ಪೂಜಾರಿ

independence day [1]ಮಂಗಳೂರು : ನಗರದ ನೆಹರೂ ಮೈದಾನದಲ್ಲಿ ನಡೆದ ದ.ಕ. ಜಿಲ್ಲಾ ಮಟ್ಟದ 74ನೇ ಸ್ವಾತಂತ್ರ್ಯೋತ್ಸವ ಸಮಾರಂಭದ ಧ್ವಜಾರೋಹಣವನ್ನು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ನೆರವೇರಿಸಿ  ಸ್ವಾತಂತ್ರ್ಯೋತ್ಸದ  ಸಂದೇಶ ನೀಡಿದರು.

ಗೌರವವಂದನೇ ಸ್ವೀಕರಿಸಿದ ಬಳಿಕ ಮಾತನಾಡಿದ ಉಸ್ತುವಾರಿ ಸಚಿವರು  ಸುಮಾರು 5 ಕೋಟಿ ಜನರು ಆಯುಷ್ಮಾನ್ ಭಾರತ್, ಕಿಸಾನ್‌‌‌ ಸಮ್ಮಾನ್‌‌ ಮುಂತಾದ ಸರ್ಕಾರದ ಯೋಜನೆಗಳನ್ನು ಬಳಸಿಕೊಂಡಿದ್ದಾರೆ. ಬಿ.ಎಸ್‌‌. ಯಡಿಯೂರಪ್ಪ ಅವರ ನೇತೃತ್ವದ ರಾಜ್ಯ ಸರ್ಕಾರವು ರೈತರ ಪರವಾಗಿದ್ದು, ರೈತರಿಗೆ ನೆರವಾಗುವ ನಿಟ್ಟಿನಲ್ಲಿ ನಾವು ರೈತರ ಬೆಳೆ ಸಮೀಕ್ಷೆ ಅಪ್ಲಿಕೇಶನ್ 2020-21 ಅನ್ನು ಸಹ ಪ್ರಾರಂಭಿಸಿದ್ದೇವೆ. ಅಲ್ಲದೇ, ರಾಜ್ಯದ ಮೀನುಗಾರಿಕಾ ಇಲಾಖೆಯಲ್ಲಿ 10,000 ಉದ್ಯೋಗಗಳನ್ನು ಒದಗಿಸಲು ಸರ್ಕಾರ ಮುಂದಾಗಿದೆ ಎಂದು ತಿಳಿಸಿದರು.

independence day [2]ಸರ್ಕಾರದ ಜನ ಸ್ನೇಹಿ ಯೋಜನೆಗಳನ್ನು ಪ್ರತಿ ಮನೆಗೆ ತಲುಪುವಂತೆ ಮಾಡುವುದು ನಮ್ಮಉದ್ದೇಶವಾಗಿದೆ. ಪ್ರತಿಯೊಬ್ಬರು ಇದರ ಬಳಕೆ ಮಾಡಬೇಕು ಎಂದರು.

ಕೋವಿಡ್ ಅನಿರೀಕ್ಷಿತ ಆಗಮನ ಆತಂಕಕ್ಕೀಡು ಮಾಡಿದ್ದರೂ ಸವಾಲಾಗಿ ಸ್ವೀಕರಿಸಿ ರಾಜಿ ಮಾಡಿಕೊಳ್ಳದೆ ಉತ್ಕೃಷ್ಟ ಮಟ್ಟದ ಚಿಕಿತ್ಸೆ ಕೋವಿಡ್ ಸೋಂಕಿತರಿಗೆ ನೀಡಲಾಗುತ್ತಿದೆ,  ಅಲ್ಲದೇ, ಸಿಎಂ ಅವರ ಮಾರ್ಗದರ್ಶನದಲ್ಲಿ ರಾಜ್ಯದಲ್ಲಿ ಕೊರೊನಾ ಸೋಂಕನ್ನು ನಿಯಂತ್ರಿಸುವಲ್ಲಿ ಸರ್ಕಾರ ಯಶಸ್ವಿಯಾಗಿದೆ. ಲಾಕ್‌ಡೌನ್‌ ಸಂದರ್ಭದಲ್ಲಿ ಸಾರ್ವಜನಿಕರಿಗೆ ಪಡಿತರ ಹಾಗೂ ಆಹಾರ ಕಿಟ್‌‌ಗಳನ್ನು ಪೂರೈಕೆ ಮಾಡುವಲ್ಲಿ ನಾವು ಯಶಸ್ವಿಯಾಗಿದ್ದೇವೆ. ದತ್ತಿ ಇಲಾಖೆಯೂ ಕೂಡಾ ಅಗ್ಯವಿರುವಂತ ಆಹಾರವನ್ನು ಒದಗಿಸಿದೆ. ಇದಲ್ಲದೇ, ಹಲವಾರು ಸಂಸ್ಥೆಗಳು, ಸಾಮಾಜಿಕ ಕಾರ್ಯಕರ್ತರು ಮತ್ತು ಜನರ ಪ್ರತಿನಿಧಿಗಳು ಆಹಾರ ಕಿಟ್ ಮತ್ತು ಔಷಧಿಗಳನ್ನು ವಿತರಿಸುವ ಮೂಲಕ ಲಾಕ್‌ಡೌನ್‌‌ ಸಮಯದಲ್ಲಿ ಜನರಿಗೆ ನೆರವಾಗಲು ಮುಂದೆ ಬಂದಿದ್ದಾರೆ. ಇದರೊಂದಿಗೆ ನಾವು ಅಂತರಾಜ್ಯ ಹಾಗೂ ಅಂತರಾಷ್ಟ್ರೀಯ ಪ್ರಯಾಣಿಕರ ಆಗಮನವನ್ನೂ ಕೂಡಾ ನಿರ್ವಹಿಸಿದ್ದೇವೆ ಎಂದರು.

ಮಂಗಳೂರಿನಲ್ಲಿ ಸ್ಮಾರ್ಟ್ ಸಿಟಿ ಯೋಜನೆಗೆ 2,000 ಕೋಟಿ. ರೂ ಹಂಚಿಕೆ ಮಾಡಲಾಗಿದೆ. ಇದರಲ್ಲಿ ರೂ. 338 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದ್ದು, 100 ಕೋಟಿ ರೂ.ಗಳ ಮೌಲ್ಯದ ಕೆಲಸಗಳು ಈವರೆಗೆ ಪೂರ್ಣಗೊಂಡಿವೆ. ಜಿಲ್ಲಾ ವೆನ್ಲಾಕ್ ಆಸ್ಪತ್ರೆಯ ಅಭಿವೃದ್ದಿಗಾಗಿ 5.83 ಕೋಟಿ ರೂ. ಕಳುಹಿಸಲಾಗಿದೆ. 2.31 ಕೋಟಿ ರೂ ವೆಚ್ಚದಲ್ಲಿ ಲೇಡಿ ಗೋಶೆನ್ ಆಸ್ಪತ್ರೆಯ ಎರಡನೇ ಮಹಡಿಯ ಅಭಿವೃದ್ಧಿಯನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

independence day [3]ಜಿಲ್ಲೆಯಲ್ಲಿ ಪ್ರಧಾನಿ ಕಿಸಾನ್ ಸಮ್ಮನ್ ಯೋಜನೆಯಡಿ 1,35,841 ರೈತರಿಗೆ ತಲಾ 10,000 ರೂ. ಅನ್ನು ಬಿಡುಗಡೆ ಮಾಡಲಾಗಿದ್ದು, ಇದರ ಒಟ್ಟು ವೆಚ್ಚ 137 ಕೋಟಿ ರೂ. ಆಗಿದೆ ಎಂದು ಮಾಹಿತಿ ನೀಡಿದರು.

ಹೊಸ ತಾಲೂಕುಗಳಾದ ಮೂಡುಬಿದ್ರೆ ಹಾಗೂ ಕಡಬದಲ್ಲಿ ಹೊಸ ಮಿನಿ ವಿಧಾನ ಸೌಧ ನಿರ್ಮಾಣಕ್ಕಾಗಿ 10 ಕೋಟಿ ರೂ.ಗಳನ್ನು ಮಂಜೂರು ಮಾಡಲಾಗಿದ್ದು, ಅದರಲ್ಲಿ 2 ಕೋಟಿ ರೂ. ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದರು.

ಬಿ.ಸಿ.ರೋಡ್‌‌, ಪುಂಜಾಲಕಟ್ಟೆ ರಾಷ್ಟ್ರೀಯ ಹೆದ್ದಾರಿ ರಸ್ತೆ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ಕಾರ್ಕಳ, ಮೂಡುಬಿದ್ರೆ ಮತ್ತು ಮಂಗಳೂರುಗಳಲ್ಲಿ ರಸ್ತೆ ಕೆಲಸವನ್ನು ಶೀಘ್ರವಾಗಿ ಕೈಗೊಳ್ಳಲು ನಾವು ನಿರ್ಧರಿಸಿದ್ದೇವೆ ಎಂದು ಹೇಳಿದರು.

ಈ ವೇಳೆ ವೆನ್ಲಾಕ್ ಆಸ್ಪತ್ರೆ, ವೈದ್ಯರು, ಡಿಎಚ್‌ಒ, ಪೊಲೀಸ್, ಕಂದಾಯ ಇಲಾಖೆ, ಆರೋಗ್ಯ ಇಲಾಖೆ, ನಾಗರಿಕ ಕಾರ್ಯಕರ್ತರು, ಎಸ್‌ಎಸ್‌ಎಲ್‌ಸಿ ಪರೀಕ್ಷಾ ಸಾಧಕರು ಮತ್ತು ಕೊರೊನಾ ಯೋಧರನ್ನುಸೇರಿದಂತೆ 20 ಮಂದಿಯನ್ನು ಗೌರವಿಸಿ ಸನ್ಮಾನಿಸಲಾಯಿತು. ಪೆರೇಡ್ ಕಮಾಂಡರ್ ಎಂ.ಎ.ಉಪಾಸೆ ನೇತೃತ್ವದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಐದು ತಂಡಗಳು ಭಾಗವಹಿಸಿದ್ದವು.

independence day [4]ಕಾರ್ಯಕ್ರಮದಲ್ಲಿ ಕೊರೋನ ಯೋಧರಾಗಿ ಕಾರ್ಯನಿರ್ವಹಿಸುತ್ತಿದ್ದ ವೇಳೆ ಅದೇ ಸೋಂಕಿಗೆ ಒಳಗಾಗಿ, ಗುಣಮುಖರಾದ ಬಳಿಕ ಮತ್ತೆ ಕರ್ತವ್ಯಕ್ಕೆ ಹಾಜರಾಗಿ ಸೇವೆ ಸಲ್ಲಿಸುತ್ತಿರುವ ಜಿಲ್ಲಾ ವೆನ್ಲಾಕ್ ಆಸ್ಪತ್ರೆ, ವಿವಿಧ ಇಲಾಖೆ, ಪೊಲೀಸ್ ಇಲಾಖೆ ಸಿಬ್ಬಂದಿ

ಸಂಸದ ನಳಿನ್ ಕುಮಾರ್ ಕಟೀಲು, ಶಾಸಕರಾದ ವೇದವ್ಯಾಸ ಕಾಮತ್, ಡಾ.ಭರತ್ ಶೆಟ್ಟಿ, ಪ್ರತಾಪ್ ಸಿಂಹ ನಾಯಕ್, ಮೇಯರ್ ದಿವಾಕರ ಪಾಂಡೇಶ್ವರ, ತುಳು ಸಾಹಿತ್ಯ ಅಕಾಡಮಿಯ ಅಧ್ಯಕ್ಷ ದಯಾನಂದ ಕತ್ತಲ್ ಸಾರ್, ಜಿಲ್ಲಾಧಿಕಾರಿ ಡಾ.ರಾಜೇಂದ್ರ, ಪೊಲೀಸ್ ಆಯುಕ್ತ ಡಾ.ವಿಕಾಸ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.